
ನಾಮಪತ್ರ ಸಲ್ಲಿಸುವಾಗ ನಡುರಸ್ತೆಯಲ್ಲೇ ಮಹಿಳೆಯ ಸೀರೆ ಎಳೆದು ವಿಕೃತಿ ಮೆರೆದ ದುಷ್ಟರು..
Friday, July 9, 2021
ನವದೆಹಲಿ: ಸ್ಥಳೀಯ ಚುನಾವಣೆಯ ನಾಮಪತ್ರ ಸಲ್ಲಿಕೆ ವೇಳೆ ವ್ಯಕ್ತಿಗಳಿಬ್ಬರು ಮಹಿಳೆಯೊಬ್ಬಳ ಮೇಲೆ ಕೈ ಮಾಡಿ ಆಕೆಯ ಸೀರೆಯನ್ನು ಎಳೆದು ಮಾನಭಂಗಕ್ಕೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮಹಿಳೆಯ ಮೇಲೆ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಾರ್ಟಿಯ ಬೆಂಬಲಿಗರೆಂದು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಬ್ಲಾಕ್ ಪಂಚಾಯಿತಿ ಚುನಾವಣೆಗೆ ಅಭ್ಯರ್ಥಿಯೊಬ್ಬರ ಜತೆಗೆ ಆಕೆಯು ಸಹ ನಾಮಪತ್ರ ಸಲ್ಲಿಸಲು ಬಂದಿದ್ದಳು ಎಂದು ವರದಿಯಾಗಿದೆ.
ಈ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಿಂದ 130 ಕಿ.ಮೀ ದೂರದಲ್ಲಿರುವ ಲಖಿಂಪುರ್ ಖೇರಿಯಲ್ಲಿ ನಡೆದಿದೆ.