-->
ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ..

ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ..

ಕಾನ್ಪುರ್​(ಉತ್ತರ ಪ್ರದೇಶ): ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ವಿವಾಹಿತೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶ ಕಾನ್ಪುರ್​​ದ ಗೋವಿಂದನಗರ ಪೊಲೀಸ್​ ಠಾಣಾ ಪ್ರದೇಶದಲ್ಲಿ ನಡೆದಿದೆ. 

2019ರಲ್ಲಿ ಪ್ರದೀಪ್​ ಆನಂದ್ ಶರ್ಮಾ ಜೊತೆ ವಿವಾಹ ಮಾಡಿಕೊಂಡಿದ್ದಳು. ಗಂಡನ ಸಹೋದರರೊಂದಿಗೆ ಬೇಸರಗೊಂಡು ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದಾಳೆ. ಪೂಜಾ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುಂಚಿತವಾಗಿ  ತನ್ನ ಸಹೋದರನಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವ್ಯಾಟ್ಸ್​ಆ್ಯಪ್ ಮಾಡಿದ್ದಾಳೆ. ಇದನ್ನ ನೋಡಿರುವ ಆಕೆಯ ಸಹೋದರ ತಕ್ಷಣವೇ ತಂದೆಗೆ ಮಾಹಿತಿ ನೀಡಿದ್ದಾನೆ. ಮಹಿಳೆಯ ತಂದೆ ಅಳಿಯನಿಗೆ ಫೋನ್ ಮಾಡಿ ಮಾಹಿತಿ ನೀಡಬೇಕು ಎನ್ನುವಷ್ಟರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆದರೆ ಸಾವನ್ನಪ್ಪಿದ್ದಾಳೆಂದು ವೈದ್ಯರು ಘೋಷಣೆ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article