-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
'ನನ್ನ ಸಾವಿಗೆ ಸುಬ್ಬನೇ ಕಾರಣ’ ಡೆತ್​ನೋಟ್ ಬರೆದಿಟ್ಟು ಬಾಲಕಿ ಸಾವು...!!

'ನನ್ನ ಸಾವಿಗೆ ಸುಬ್ಬನೇ ಕಾರಣ’ ಡೆತ್​ನೋಟ್ ಬರೆದಿಟ್ಟು ಬಾಲಕಿ ಸಾವು...!!

 ಬೆಂಗಳೂರು: ‘ನನ್ನ ಸಾವಿಗೆ ಸುಬ್ಬನೇ ಕಾರಣ’ ಎಂದು ಡೆತ್​ನೋಟ್ ಬರೆದಿಟ್ಟು ಮೂರು ದಿನಗಳ ಹಿಂದೆ ವಿಷ ಕುಡಿದಿದ್ದ ಬಾಲಕಿ ಇಂದು ಸಾವಿಗೀಡಾಗಿದ್ದಾಳೆ.ನನ್ನ ಸಾವಿಗೆ ಸುಬ್ಬನೇ ಕಾರಣ ಎಂದು ಸುಬ್ರಹಣ್ಯ ಎಂಬಾತನ ಕುರಿತು ಬಾಲಕಿ ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾಳೆ. ಈ ಘಟನೆ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ.

ಸಾವಿಗೀಡಾದ ಬಾಲಕಿ ಕೆಲವು ದಿನಗಳ ಹಿಂದೆ ಶೌಚಾಲಯಕ್ಕೆ ಹೋಗಿ ಬರುತ್ತಿದ್ದಾಗ ಅದೇ ಗ್ರಾಮದ ಸುಬ್ರಹ್ಮಣ್ಯ ಎಂಬಾತ ಮುಸುಕು ಹಾಕಿಕೊಂಡು ಬಂದು ಆಕೆಯನ್ನು ಹಿಡಿದು ಎಳೆದಾಡಿದ್ದ. ಅವಳು ಅಮ್ಮ ಎಂದು ಕಿರುಚಿಕೊಂಡಿದ್ದಾಗ ಓಡಿ ಹೋಗಿದ್ದ. ಓಡುವಾಗ ಆತನ ಮೊಬೈಲ್​ಫೋನ್ ಬಿದ್ದು ಹೋಗಿತ್ತು.ಹೀಗಾದ ಬಳಿಕ ಆತ ಬಾಲಕಿಯ ಕುರಿತು ಕೆಟ್ಟದಾಗಿ ಹೇಳಿಕೊಂಡು ತಿರುಗಾಡಿದ್ದ. ಆ ವಿಷಯ ಆಕೆಯ ತಂದೆ-ತಾಯಿವರೆಗೂ ತಲುಪಿದ್ದು, ಮನೆಯವರು ಕೇಳಿದಾಗ ಬಾಲಕಿ ಅವಮಾನಕ್ಕೀಡಾಗಿದ್ದಾಳೆ. ಆತನಿಂದ ತಂದೆ-ತಾಯಿ ಬಳಿಯೂ ಅವಮಾನಕ್ಕೀಡಾಗುವಂತೆ ಆಯಿತೆಂದು ವಿಷ ಕುಡಿದಿದ್ದಳು.ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

 ಈ ಬಗ್ಗೆ ಬಾಲಕಿಯ ಪೋಷಕರು ನಂದಗುಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99