-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೇಳಿದ್ದು ಸಂಬಳ, ಹಾರಿಸಿದ್ದು ಗುಂಡು; ತಗುಲಿದ್ದು ಮಾತ್ರ ಮಗನಿಗೆ

ಕೇಳಿದ್ದು ಸಂಬಳ, ಹಾರಿಸಿದ್ದು ಗುಂಡು; ತಗುಲಿದ್ದು ಮಾತ್ರ ಮಗನಿಗೆ

ಮಂಗಳೂರು: ಸಂಬಳ ವಿಚಾರವಾಗಿ ಸಿಬ್ಬಂದಿ ಜೊತೆ ನಡೆದ ವಾಗ್ವಾದದಿಂದ ಕೋಪಗೊಂಡ ಉದ್ಯಮಿಯೋರ್ವ ಶೂಟೌಟ್ ಮಾಡಿದ್ದು, ದುರದೃಷ್ಟವಶಾತ್ ಗುಂಡು ಉದ್ಯಮಿಯ ಮಗನ ತಲೆಗೆ ತಗುಲಿದ ಘಟನೆ ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ ನಡೆದಿದೆ.
ಮೋರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಎಕ್ಸ್‌ಪ್ರೆಸ್‌ ಕಾರ್ಗೊಲ ಪ್ರೈ.ಲಿ. ಮಾಲಕ ರಾಜೇಶ್ ಪ್ರಭು ಹಾರಿಸಿದ ಗುಂಡು ಸ್ವತಃ ಆತನ ಮಗ ಸುದೀಂದ್ರನ ತಲೆಗೆ ಹೊಕ್ಕಿದೆ.


ಕೂಡಲೇ ಸುದೀಂದ್ರನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.




ರಾಜೇಶ್ ಪ್ರಭು ಬಳಿ ಕೆಲಸ ಮಾಡುವ ಸಿಬ್ಬಂದಿ ಓರ್ವ ಸಂಬಳ ವಿಚಾರವಾಗಿ ಮಾತನಾಡುತ್ತಿದ್ದ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದಿದ್ದು, ಕೋಪಗೊಂಡಿದ್ದ ರಾಜೇಶ್ ಪ್ರಭು ಗುಂಡು ಹಾರಿಸಿದ್ದ.

ಘಟನೆ ಕುರಿತು ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಈ ಘಟನೆ ಯಾವ ಕಾರಣಕ್ಕಾಗಿ ನಡೆದಿದೆ ಎಂದು ತಿಳಿದು ಬಂದಿಲ್ಲ. ಘಟನೆಯಲ್ಲಿ ಬಳಸಿರುವ ಗನ್ ಪರವಾನಿಗೆ ಹೊಂದಿದ್ದು, ಎರಡು ರೌಂಡ್ ಗುಂಡು ಹಾರಿಸಲಾಗಿದೆ.
ಈ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99