ಇದರಿಂದ ಹೆದರಿದ ಯುವತಿ, ತನ್ನ ಸ್ನೇಹಿತನಿಗೆ ಎಲ್ಲವನ್ನೂ ಹೇಳಿ ಖಾಸಗಿ ಫೋಟೋಗಳಿದ್ದ ಆ ಮೊಬೈಲ್ ಫೋನ್ ಅವನಿಂದ ತೆಗೆದುಕೊಂಡು ಬರುವಂತೆ ಹೇಳಿದ್ದಾಳೆ. ಅದರಂತೆ ನ. 16ರಂದು ಮಧ್ಯರಾತ್ರಿ ತೆರಳಿದ್ದ ನಾಲ್ಕು ಜನರ ಗುಂಪು ಸಂತೋಷ್ ವಾಸವಿದ್ದ ಕೊಡಿಗೆಹಳ್ಳಿಯ ನಿವಾಸಕ್ಕೆ ತೆರಳಿ ಮನೆಯಲ್ಲಿದ್ದ ಸಂತೋಷ್ ಹಾಗೂ ಸ್ನೇಹಿತರನ್ನು ಬೆದರಿಸಿ ಮನೆಯಲ್ಲಿದ್ದ ಮೂರು ಮೊಬೈಲ್ಗಳನ್ನು ರಾಬರಿ ಮಾಡಿದ್ದರು. ಘಟನೆ ಸಂಬಂಧ ಕೊಡಿಗೆಹಳ್ಳಿ ಠಾಣೆಯಲ್ಲಿ ರಾಬರಿ ಕೇಸ್ ದಾಖಲಾಗಿತ್ತು. ಸಂತೋಷ್ ನೀಡಿದ ದೂರಿನ ಮೇರೆಗೆ ಆರೋಪಿಗಳ ವಿಚಾರಣೆ ಮಾಡಿದಾಗ ಅಸಲಿ ವಿಷಯ ಬಯಲಾಗಿದೆ.
ಈ ಘಟನೆ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತ ಯುವತಿ ಸಂತೋಷ್ ತನ್ನ ಮೊಬೈಲ್ನಲ್ಲಿ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಎಂದು ನೀಡಿದ ದೂರಿನಡಿ ಸಂತೋಷ್ ನನ್ನು ಪೊಲೀಸರು ಬಂಧಿಸಿದ್ದಾರೆ.