-->

ಚರ್ಮಕ್ಕೆ ಚರ್ಮ ತಾಗಿದರೆ ಮಾತ್ರ ಅತ್ಯಾಚಾರ- ವಿವಾದಿತ ತೀರ್ಪು ನೀಡಿದ JUDGE ಪುಷ್ಪಾ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

ಚರ್ಮಕ್ಕೆ ಚರ್ಮ ತಾಗಿದರೆ ಮಾತ್ರ ಅತ್ಯಾಚಾರ- ವಿವಾದಿತ ತೀರ್ಪು ನೀಡಿದ JUDGE ಪುಷ್ಪಾ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ


 ನವದೆಹಲಿ : ಅತ್ಯಾಚಾರ ಪ್ರಕರಣವೊಂದರಲ್ಲಿ ' ಚರ್ಮಕ್ಕೆ ಚರ್ಮ ತಾಗಿದರೆ ಮಾತ್ರವೇ ಅತ್ಯಾಚಾರ ಎನ್ನಿಸಿಕೊಳ್ಳುತ್ತದೆ ,  ಎಂದು ವಿವಾದಿತ ತೀರ್ಪನ್ನು ನೀಡಿದ್ದ ಮುಂಬಯಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿ ಪುಷ್ಪಾ ಗನೇಡಿವಾಲಾ ಅವರ ರಾಜೀನಾಮೆ ಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಗೀಕರಿಸಿದ್ದಾರೆ . 

ಪೋಸ್ಕೊ ಕಾಯಿದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ಪುಷ್ಪಾ ಅವರು ನೀಡಿದ್ದ ಚರ್ಮಕ್ಕೆ ಚರ್ಮ ತಾಗಿದರೆ ಮಾತ್ರವೇ ಅತ್ಯಾಚಾರ ಎನ್ನಿಸಿಕೊಳ್ಳುತ್ತದೆ  ತೀರ್ಪು ತೀವ್ರ ವಿವಾದ ಸೃಷ್ಟಿಸಿತ್ತು . 

ಹೀಗಾಗಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರನ್ನು ಖಾಯಂ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಅಥವಾ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಅವರ ಸೇವಾವಧಿಯನ್ನು ವಿಸ್ತರಿಸಲು ಶಿಫಾರಸು ಮಾಡಿರಲಿಲ್ಲ . ಹೀಗಾಗಿ ಮುಂಬಯಿ ಹೈಕೋರ್ಟ್‌ನ ನಾಗ್ಪುರ ಪೀಠದಲ್ಲಿ ಹೆಚ್ಚುವರಿ ನ್ಯಾಯಮೂರ್ತಿಯಾಗಿದ್ದ ಅವರು ತಮ್ಮ ಸೇವಾವಧಿಯ ಕೊನೆಯ ದಿನವಾದ ಕಳೆದ ಫೆ .13 ರಂದು ರಾಜೀನಾಮೆಯನ್ನು ನೀಡಿದ್ದರು . ಒಂದು ತಿಂಗಳ ಬಳಿಕ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ .

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99