-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹಣದ ದಾಹಕ್ಕೆ ಯುವತಿ ಬಲಿ: ವೇಲ್ ನಿಂದ ಕತ್ತು ಬಿಗಿದು ಪತ್ನಿಯ ಹತ್ಯೆಗೈದ ಪತಿ

ಹಣದ ದಾಹಕ್ಕೆ ಯುವತಿ ಬಲಿ: ವೇಲ್ ನಿಂದ ಕತ್ತು ಬಿಗಿದು ಪತ್ನಿಯ ಹತ್ಯೆಗೈದ ಪತಿ

ಬೆಂಗಳೂರು: ತವರು ಮನೆಯಿಂದ ಹಣ ತರಲು ನಿರಾಕರಿಸಿರುವ ಪತ್ನಿಯನ್ನು ವೇಲ್‌ನಿಂದ ಕತ್ತು ಬಿಗಿದು ಕೊಲೆ ಮಾಡಿರುವ ಆರೋಪದ ಮೇಲೆ ಪತಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು, ಮುನೇಶ್ವರ ನಗರ ವಾಸಿ, ಚಾಲಕ ಪತಿ ಯೋಗೇಶ್(28) ಬಂಧಿತ ಆರೋಪಿ. 

ವೃತ್ತಿಯಲ್ಲಿ ಚಾಲಕನಾಗಿದ್ದ ಯೋಗೀಶ್ ಮೂರು ವರ್ಷಗಳ ಹಿಂದೆ ಸೌಮ್ಯಾ ಎಂಬಾಕೆಯನ್ನು ಪ್ರೀತಿಸಿ ವಿವಾಹವಾಗಿದ್ದ. ಪತ್ನಿ ಸೌಮ್ಯ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಳು.‌ ಆರಂಭದಲ್ಲಿ ಅನೋನ್ಯವಾಗಿದ್ದ ದಂಪತಿಯ ನಡುವೆ ಕಾಲಕ್ರಮೇಣ ವಿರಸ ಉಂಟಾಗಿತ್ತು. ಯೋಗೀಶ್ ಹಣ ಹಾಗೂ‌ ಒಡವೆ ತರುವಂತೆ ಪತ್ನಿಗೆ ಒತ್ತಾಯಿಸುತ್ತಿದ್ದ. ಪುತ್ರಿ ಚೆನ್ನಾಗಿರಲೆಂದು ಸೌಮ್ಯಾ ಮನೆಯವರು ಎರಡು ಬಾರಿ ಹಣವನ್ನು ಕೊಟ್ಟಿದ್ದರು.‌ 

ಆದರೂ ಆರೋಪಿ ಯೋಗೀಶ್ ಹಣದ ದಾಹ ಕಡಿಮೆ ಆಗಿರಲಿಲ್ಲ. ಆದ್ದರಿಂದ ಆಕೆಗೆ ಪದೇ ಪದೆ ಹಣ ತರುವಂತೆ ಪೀಡಿಸಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸಿಸುತ್ತಿದ್ದ ಎನ್ನಲಾಗಿದೆ. ಕಳೆದ ಮೂರು ದಿನದಿಂದ ತವರು ಮನೆಯಿಂದ ಅರ್ಜೆಂಟ್ ಆಗಿ 2 ಲಕ್ಷ ಹಣ ರೂ. ತರುವಂತೆ ಪತ್ನಿ ಸೌಮ್ಯಾ ಜತೆ ಮನೆಯಲ್ಲಿ ಜಗಳವಾಡಿದ್ದಾನೆ. ಇದು ತಾರಕ್ಕೇರಿ ಯೋಗೀಶ್‌ ವೇಲ್‌ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ದೂರಲಾಗಿದೆ. ಸುದ್ದಿ ತಿಳಿದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99