-->

ತೋಟದೊಳಗೆ ಹುಲಿ ದಾಳಿಗೆ ಯುವಕ ಬಲಿ: ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

ತೋಟದೊಳಗೆ ಹುಲಿ ದಾಳಿಗೆ ಯುವಕ ಬಲಿ: ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

ಕೊಡಗು: ತೋಟದೊಳೆಗೆ ಬಂದಿರುವ ಹುಲಿಯೊಂದು ಯುವಕನ ಮೇಲೆರಗಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ. ಈ ಬಗ್ಗೆ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಆತನ ಮೃತದೇಹವನ್ನು ಅಲ್ಲಿಯೇ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ. 

ವಿರಾಜಪೇಟೆ ತಾಲೂಕಿನ ರುದ್ರಗುಪ್ಪೆ ಗ್ರಾಮದ ತೋಟದಲ್ಲಿ ಕಾಳುಮೆಣಸು ಕೊಯ್ಲು ನಡೆಸುತ್ತಿದ್ದ ಸಂದರ್ಭದಲ್ಲಿ ಹುಲಿಯೊಂದು ದಾಳಿ ನಡೆಸಿದೆ. ಈ ಸಂದರ್ಭ ಕಾಳುಮೆಣಸು ಕೊಯ್ಲು ನಡೆಸುತ್ತಿದ್ದ ಕಾರ್ಮಿಕ ಗಣೇಶ್(30) ಮೃತಪಟ್ಟಿದ್ದಾರೆ. ಇದೇ ಪ್ರದೇಶದಲ್ಲಿ ಕಳೆದ ವರ್ಷ ಮೂವರು ಹುಲಿಯ ದಾಳಿಗೆ ಬಲಿಯಾಗಿದ್ದಾರೆ. ಈ ಬಾರಿ ಗಣೇಶ್ ಸಾವಿಗೀಡಾದ್ದರಿಂದ ರೊಚ್ಚಿಗೆದ್ದ ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅಲ್ಲದೆ ಯುವಕನ ಮೃತದೇಹವನ್ನು ಸ್ಥಳದಲ್ಲೇ ಇರಿಸಿ ಪ್ರತಿಭಟನೆ ನಡೆಸಿ, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಎಸ್​ಪಿ ಅಯ್ಯಪ್ಪ ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅರಣ್ಯ ಅಧಿಕಾರಿಗಳು ಹುಲಿಯನ್ನು ಹಿಡಿಯಬೇಕು. ಜೊತೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99