-->

ಸಲಾಂ ಮಂಗಳಾರತಿ ದೇವರಿಗೆ ಮಾಡುವಂತಹ ಅಪಮಾನ ; ಕಲ್ಲಡ್ಕ ಪ್ರಭಾಕರ್ ಭಟ್ (Video)

ಸಲಾಂ ಮಂಗಳಾರತಿ ದೇವರಿಗೆ ಮಾಡುವಂತಹ ಅಪಮಾನ ; ಕಲ್ಲಡ್ಕ ಪ್ರಭಾಕರ್ ಭಟ್ (Video)


ಕೊಲ್ಲೂರು ಮೂಕಾಂಬಿಕೆಗೆ ನಡೆಯುವ ಸಲಾಂ ಮಂಗಳಾರತಿಯನ್ನು ನಿಲ್ಲಿಸಬೇಕು ಅಂತ ಆರ್‌ಎಸ್‌‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಗ್ರಹಿಸಿದ್ದಾರೆ. 


ಉಡುಪಿಯ ಬೈಂದೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ನಮ್ಮ ದೇವರನ್ನು ಅವಹೇಳನ ಮಾಡಿದಂತಹ ನಮ್ಮ ಸಮಾಜವನ್ನು ನಾಶ ಮಾಡಲು ಹೊರಟಂತ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ.ಅದು ದೇವರಿಗೆ ಮಾಡುವಂತಹ ಅಪಮಾನ ಎಂದು ಹೇಳಿದರು




  ಇದನ್ನು ಎಷ್ಟು ಬೇಗ ತೆಗೆದು ಹಾಕುತ್ತಾರೋ ಅಷ್ಟು ಶ್ರೇಯಸ್ಸು. ಇದರಿಂದ ದೇವರ ಶಕ್ತಿ ಕಡಿಮೆ ಆಗುತ್ತದೆ ಈ ರೀತಿಯಲ್ಲಿ ಮಾಡಬಾರದು ಅಂತ ಹೇಳಿದ್ದಾರೆ. ಸಲಾಂ ಮಂಗಳಾರತಿಯನ್ನು ಶೀಘ್ರವಾಗಿ ತೆಗೆದು, ದೇವರ ಹೆಸರಿನಲ್ಲಿ ಪೂಜೆ ಮಾಡಲಿ. ಸಲಾಂ ಇನ್ನೂ ಸ್ವಲ್ಪ ವರ್ಷ ಹೋದ್ರೆ, ಅಲಾಹು ಸಲಾಂ ಅಂತ ಬರುವ ಸಾಧ್ಯತೆ ಇದೆ. ಅವರಲ್ಲಿ ಬೇಕಾದರೆ ಮಾಡಲಿ ನಮ್ಮಲ್ಲಿ ಬೇಡ ನಮ್ಮ ದೇವಸ್ಥಾನದಲ್ಲಿ ನಮ್ಮ ನಮ್ಮತನ ಇರಬೇಕ, ಇಂತಹ ಸಲಾಂ ಪೂಜೆ ನಡೆಯಬಾರದು ಅಂತ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99