-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗಂಗೊಳ್ಳಿಯಲ್ಲಿ ಗುಡಿಸಲಿಗೆ ಬೆಂಕಿ ; ಒರ್ವ ಸಾವು

ಗಂಗೊಳ್ಳಿಯಲ್ಲಿ ಗುಡಿಸಲಿಗೆ ಬೆಂಕಿ ; ಒರ್ವ ಸಾವು


ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ವ್ಯಕ್ತಿಯೋರ್ವರು ಸಜೀವ ದಹನವಾದ ದಾರುಣ ಘಟನೆ ಗಂಗೊಳ್ಳಿಯಲ್ಲಿ  ನಡೆದಿದೆ. ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (42)ಬೆಂಕಿ ಅವಘಡ ದಿಂದ ಮೃತಪಟ್ಟ ದುರ್ದೈವಿ.

 ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಗಣೇಶ ಖಾರ್ವಿ ಇಂದು ಮುಂಜಾನೆ ಗಂಗೊಳ್ಳಿ ಬಂದರಿನಲ್ಲಿರುವ ಬೋಟಿನ ಸಮೀಪ ಹೋಗಿ ಪುನಃ ಮನೆಯಲ್ಲಿ ಬಂದು ಮಲಗಿದ್ದರು. ಇದೇ ಸಂದರ್ಭ ಬೆಳಿಗ್ಗೆ ಸುಮಾರು 8.30ರ ಹೊತ್ತಿಗೆ ಮನೆಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಗಣೇಶ ಖಾರ್ವಿ ಮಂಚದ ಮೇಲೆ ಮಲಗಿದ್ದಲ್ಲೆ ಸುಟ್ಟು ಸಜೀವ ದಹನಗೊಂಡಿದ್ದಾರೆ. ಮೃತ ಗಣೇಶ್ ಹೊಸ ಮನೆ ಕಟ್ಟುತ್ತಿದ್ದು ಮನೆ ಸಮೀಪದಲ್ಲೇ ಪುಟ್ಟ ಗುಡಿಸಲಿನಲ್ಲಿ ಪತ್ನಿ ಜೊತೆ ವಾಸಿಸುತ್ತಿದ್ದರು. 

ಇವರ ಪತ್ನಿ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಗಣೇಶ ಖಾರ್ವಿ ಮನೆಯಲ್ಲಿ ಕಾಣಿಸಿಕೊಂಡ ದಟ್ಟ ಹೊಗೆಯನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಮನೆಗೆ ತಗುಲಿದ ಬೆಂಕಿಯನ್ನು ನಂದಿಸುವ ಕಾರ್ಯದ, ಗಣೇಶ ಖಾರ್ವಿ ಮನೆಯ ಒಳಗೆ ಇರುವುದು ಯಾರಿಗೂ ತಿಳಿದಿರಲಿಲ್ಲ. ಬಳಿಕ ಸ್ಥಳೀಯರು ಮನೆಗೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಬೈಂದೂರು ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99