-->

UDUPI;  ಭೋಜಣ್ಣ ಆತ್ಮಹತ್ಯೆ ಹಿಂದೆ  9 ಕೋಟಿ ಸಾಲದ ಕಥೆ; ಡೆತ್‌ ನೋಟ್‌ನಲ್ಲಿ ಕಾರಣ ಬಹಿರಂಗ

UDUPI; ಭೋಜಣ್ಣ ಆತ್ಮಹತ್ಯೆ ಹಿಂದೆ 9 ಕೋಟಿ ಸಾಲದ ಕಥೆ; ಡೆತ್‌ ನೋಟ್‌ನಲ್ಲಿ ಕಾರಣ ಬಹಿರಂಗ

ಕಟ್ಟೆ ಭೋಜಣ್ಣ ಶೂಟೌನ್ ಮಾಡಿಕೊಂಡು ಸೂಸೈಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ಲಭ್ಯವಾಗಿದ್ದು, ಸೂಸೂಡ್ ಮಾಡಿಕೊಳ್ಳಲು 9 ಕೋಟಿ ಸಾಲವೇ ಕಾರಣ ಎನ್ನಲಾಗಿದೆ. ಭೋಜಣ್ಣ ಶೆಟ್ಟಿ ಬರೆದ 
ಡೆತ್ತ ನೋಟಿನಲ್ಲಿ ಮೊಳಹಳ್ಳಿ ಗಣೇಶ್ ಶೆಟ್ಟಿ ಮತ್ತು ಮಂಗಳೂರು ಇಸ್ಮಾಯಿಲ್ ಹೆಸರು ಪ್ರಸ್ತಾಪವಾಗಿದ್ದು,  ಇಬ್ಬರು ಸೇರಿ  3ಕೋಟಿ 34 ಲಕ್ಷ ನಗದು, 5 ಕೆಜಿ ಬಂಗಾರ ವಂಚಿಸಿದ್ದಾರೆ ಅಂತ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ. ಬಡ್ಡಿ ಆಸೆ ತೋರಿಸಿ ಭೋಜಣ್ಣ ಅವರಿಂದ ಸಾಲ ಪಡೆದು,
ಬಡ್ಡಿಯನ್ನು ಕೊಡದೇ ಅಸಲನ್ನು ನೀಡದೆ  ಮೊಳಹಳ್ಳಿ ಗಣೇಶ್ ಶೆಟ್ಟಿ  ಸತಾಯಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರಿಂದ ಐದಾರು ಬಾರಿ ಕಾಂಪ್ರಮೈಸ್ ಮಾಡಲು ಪ್ರಯತ್ನಪಟ್ಟರೂ, ಇದಕ್ಕೂ ಒಪ್ಪದೇ ದುಡ್ಡು ಕೊಡದೆ ಸತಾಯಿಸುತ್ತಿದ್ದನಂತೆ ಲ
ಇದರಿಂದ ಬೇಸತ್ತು ಗಣೇಶ್ ಶೆಟ್ಟಿ ಮನೆ ಮುಂಭಾಗದಲ್ಲಿ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  ಮಂಗಳೂರು ಇಸ್ಮಾಯಿಲ್ ಮತ್ತು ಗಣೇಶ್ ಶೆಟ್ಟಿ ಇಂದ ಮನೆಯವರಿಗೆ ದುಡ್ಡು ತೆಗೆಸಿ ಕೊಡುವಂತೆ ಭೋಜಣ್ಣ ಕೊನೆಯ ಡೆತ್‌ನೋಟ್‌ನಲ್ಲಿ  ಮನವಿ ಮಾಡಿ,  ತನ್ನ ಪರವಾನಿಗೆ ಇರುವ ರಿವಾಲ್ವರ್ನಿಂದ ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು..

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99