-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
UDUPI : ಪೊಲೀಸರ ಸಮಯಪ್ರಜ್ಞೆಯಿಂದ ಬದುಕಿದ ಆತ್ಮಹತ್ಯೆಗೆ ಯತ್ನಿಸಿದ ಯುವಕ

UDUPI : ಪೊಲೀಸರ ಸಮಯಪ್ರಜ್ಞೆಯಿಂದ ಬದುಕಿದ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಉಡುಪಿ ನಗರ ಠಾಣೆಯ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ ಆತ್ಮಹತ್ಯೆಗೆ ಯತ್ನಿಸಿಸಿದ್ದ ಯುವಕನೊಬ್ಬನ ಜೀವ ಉಳಿದಿದೆ. ಉಡುಪಿಯ ರೋಹನ್ ರಾಜೇಶ್ ಜತ್ತನ ಆತ್ಮಹತ್ಯೆಗೆ ಯತ್ನಿಸಿ, ಪೊಲೀಸರಿಂದ ರಕ್ಷಿಸಲ್ಪಟ್ಟ ಯುವಕ. ಕೌಟುಂಬಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದ ರೋಹನ್ ರಾಜೇಶ್ ಜತ್ತನ, ಉಡುಪಿ ನಗರದ ಖಾಸಗಿ ಲಾಡ್ಜಿನಲ್ಲಿ  ಕೈಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು, ಈ ವೇಳೆ ಮಂಗಳೂರಿನ ಆದಿತ್ಯ ಎಂಬ ಗೆಳೆಯನಿಗೆ ಕರೆ ಮಾಡಿ  ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ತಿಳಿಸಿದ್ದ. ಕೂಡಲೇ ಆದಿತ್ಯ ಮಂಗಳೂರು ಪೊಲೀಸ್ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡಿದ್ದರು.  ಮಂಗಳೂರಿನಿಂದ ಉಡುಪಿ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯಪವೃತ್ತರಾದ ಉಡುಪಿ ನಗರಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಪೊಲೀಸರೊಂದಿಗೆ ಲಾಡ್ಜ್‌ಗೆ ತೆರಳಿ ಆತ್ಮಹತ್ಯೆ ಯತ್ನಿಸಿದ್ದ ರೋಹನ್‌ನನ್ನು ಬಚಾವು ಮಾಡಿ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ..

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99