-->

UDUPI : ಕತ್ತಿ ತೋರಿಸಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ದನ ಕಳ್ಳತನ

UDUPI : ಕತ್ತಿ ತೋರಿಸಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ದನ ಕಳ್ಳತನ

ಮನೆಯವರಿಗೆ ಕತ್ತಿ ತೋರಿಸಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ದನಗಳನ್ನು ಕಳ್ಳತನ ಮಾಡಿದ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ಬಲ್ಚಾರ ಎಂಬಲ್ಲಿ ನಡೆದಿದೆ.

ಇಲ್ಲಿನ, ದಯಾಕರ್‌ ಹಾಗೂ ಪ್ರಸಾದ್‌ ಅವರು ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಕೊಟ್ಟಿಗೆ ಹತ್ತಿರದಲ್ಲಿ ಕಾರೊಂದು ನಿಂತಿರುವುದನ್ನು ಗಮನಿಸಿ ದನದ ಕೊಟ್ಟಿಗೆ ಬಂದು ನೋಡುವಾಗ ಅಪರಿಚಿತ ವ್ಯಕ್ತಿಗಳು 2 ದನಗಳನ್ನು ಎಳೆದೊಯ್ಯುತ್ತಿದ್ದರು. 

ಬಿಡಿಸಿಕೊಳ್ಳಲು ಅವರ ಸಮೀಪ ಹೋದಾಗ, ನೀವು ಮುಂದೆ ಬಂದರೆ ನಿಮಗೆ ಕತ್ತಿಯಿಂದ ಕಡಿದು ಕೊಲ್ಲುವುದಾಗಿ ಕತ್ತಿಯನ್ನು ತೋರಿಸಿ ಬೆದರಿಸಿದ್ದರು. ಸುಮಾರು 30 ಸಾವಿರ ರೂ. ಮೌಲ್ಯದ ಎರಡು ದನಗಳನ್ನು ಕದ್ದು ಪರಾರಿಯಾಗಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99