-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
UDUPI : ವನ್ಯಜೀವಿ ಬೇಟೆ: ಐವರ ಬಂಧನ

UDUPI : ವನ್ಯಜೀವಿ ಬೇಟೆ: ಐವರ ಬಂಧನ

ವನ್ಯಜೀವಿಗಳನ್ನು  ಕೊಂದ ಬೇಟೆಗಾರರನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಶಿರೂರಿನಲ್ಲಿ ನಡೆದಿದೆ.  ಬ್ರಹ್ಮಾವರದ ಚೇರ್ಕಾಡಿ ಗ್ರಾಮದ ಪೇತ್ರಿ ನಿವಾಸಿಗಳಾದ ರಾಘವೇಂದ್ರ, ಪ್ರಶಾಂತ್, ಅರುಣ್, ಚೇತನ್ ಹಾಗೂ ದೀಕ್ಷಿತ್ ಅವರನ್ನು ಬಂಧಿಸಲಾಗಿದೆ. ಶಿರೂರು ಮೂರುಕ್ಕೆ ಪರಿಸರದಲ್ಲಿ ಕಾಡುಪ್ರಾಣಿ ಶಿಕಾರಿ ನಡೆಸಿದ ತಂಡವೊಂದು ಕೆಂಪು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಶಿರೂರು ಮೂರುಕೈಯಿಂದ ಸಾಯ್ದರಕಟ್ಟೆ ಕಡೆಗೆ ಪಯಣಿಸುತ್ತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು, ಸಾಯ್ಡರಕಟ್ಟೆ ಚೆಕ್‌ ಪೋಸ್ಟ್‌ನಲ್ಲಿ ಕಾರು ಅಡ್ಡಗಟ್ಟಿ ಪರಿಶೀಲಿಸಿದಾಗ ವನ್ಯಜೀವಿಗಳ ಶಿಕಾರಿ ನಡೆಸಿರುವುದು ಬೆಳಕಿಗೆ ಬಂದಿದೆ. ಕಾರಿನಲ್ಲಿ ಪ್ಲಾಸ್ಟಿಕ್ ತೊಟ್ಟೆಯಲ್ಲಿ ರಕ್ತಸಿಕ್ತವಾದ ಬರ್ಕ, ಒಂದು ಮೊಲ ಕಂಡುಬಂದಿದೆ. ಅಲ್ಲದೆ ನಳಿಕೆ ತೋಟೆ ಕೋವಿ ಪತ್ತೆಯಾಗಿದೆ. ಕಾರು, ಸತ್ತ ಬರ್ಕ, ಕಂದು ಬಣ್ಣದ ಮೊಲ, ನಳಿಕೆ ತೋಟೆ ಕೋವಿ, 4 ತೋಟೆಗಳು, 1 ಖಾಲಿ ತೋಟೆ, ಸಣ್ಣ ಟಾಚ್ ಲೈಟ್, ಒಂದು ಜತೆ ಹೆಡ್‌ ಟಾರ್ಚ್‌ ಲೈಟ್, ನಗದು ರೂ.1970 ಹಾಗೂ 5 ಮೊಬೈಲ್ ಸ್ವಾಧೀನಪಡಿಸಿಕೊಳ್ಳಲಾಗಿದೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99