-->
UDUPI : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

UDUPI : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.ನಾಗೂರಿನ ನಿವಾಸಿ ಸದಾಶಿವ ಶ್ಯಾನುಭೋಗ್ (45) ಮೃತಪಟ್ಟವರು. ವ್ಯಾಕ್ಸ್ ವೋಗನ್ ಪೋಲೋ ಕಾರಿನಲ್ಲಿ ಕುಟುಂಬವೊಂದು ಭಟ್ಕಳದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು. ನಾಗೂರಿನಲ್ಲಿ  ಸದಾಶಿವ ಶ್ಯಾನುಭೋಗ ಅವರು ಈ ಸಂದರ್ಭ ಹೆದ್ದಾರಿ ದಾಟಲು ಯತ್ನಿಸಿದ್ದು, ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸದಾಶಿವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸದಾಶಿವ ಶ್ಯಾನುಭೋಗ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರತಿನಿತ್ಯ ನಾಗೂರು ಪೇಟೆಯಲ್ಲಿಯೇ ಸುತ್ತುತ್ತಿದ್ದರು ಎನ್ನಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article