Header Ad

ತುಮಕೂರಿನಲ್ಲಿ ಭೀಕರ ಅಪಘಾತ- 9 ಮಂದಿ ಸಾವು, ನಾಲ್ವರಿಗೆ ಗಂಭೀರ ಗಾಯ


ತುಮಕೂರು : ತುಮಕೂರಿನಲ್ಲಿ ಲಾರಿ ಮತ್ತು ಕ್ರೂಸರ್ ನಡುವೆ ಭೀಕರ ಅಪಘಾತ 9 ಮಂದಿ ಸಾವು 4 ಕ್ಕೂ ಹೆಚ್ಚು ಜನರಿಗೆ  ಗಂಭೀರ ಗಾಯ

 ಲಾರಿ ಮತ್ತು ಕ್ಯೂಸರ್  ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಬತ್ತು ಮಂದಿ ಸಾವನಪ್ಪಿದ್ದು ನಾಲ್ಕು ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಬಾಲೇನಹಳ್ಳಿ ಗೇಟ್ ಬಳ್ಳಿ ಘಟನೆ ನಡೆದಿದೆ

 ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕ್ಯೂಸರ್  ಹಾಗೂ ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಲಾರಿ ನಡುವೆ ಈ ಭೀಕರ ಅಪಘಾತ ಸಂಭವಿಸಿದ್ದು

 ಈ ಘಟನೆ ಸ್ಥಳಕ್ಕೆ ತುಮಕೂರು ಪೊಲೀಸ್  ವರಿಷ್ಠಾಧಿಕಾರಿಗಳು ಹಾಗೂ ಕಳ್ಳಂಬೆಳ್ಳ  ಮತ್ತು ಶಿರಾ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ  ಪ್ರಕರಣ ದಾಖಲಿಸಿದ್ದಾರೆ
ಇತ್ತೀಚಿನ ಸುದ್ದಿಗಳು