ಸ್ವಾಗತ, | ವ್ಯಾಲಿಡಿಟಿ:

ನಿಮ್ಮ ಪೇಜ್ ಲೋಡ್ ಆಗುತ್ತಿದೆ...

ದಯವಿಟ್ಟು ಕಾಯಿರಿ

ಗಲ್ಫ್ ಕನ್ನಡಿಗ ನ್ಯೂಸ್ ಓದಿ

ಗೂಗಲ್ ಲಾಗಿನ್ ಆಗಿ 24 ಗಂಟೆಗೆ 1 ರೂಪಾಯಿ ಪಾವತಿಸಿ

CASHFREE ADMIN LOGIN

UDUPI : ಸೀಮೆ ಎಣ್ಣೆ ಸುರಿದು, ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿಯ ಕುಂದಾಪುರ ಮನೆಯಲ್ಲಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.  ಕುಂಭಾಸಿ ಸಮೀಪದ ಕೊರವಡಿಯಲ್ಲಿ ನಡೆದಿದ್ದು,  ಕೋಟ ಪಡುಕರೆ ಫ್ರೌಢಶಾಲೆಯ 10ತರಗತಿಯ ವಿದ್ಯಾರ್ಥಿ ಅನನ್ಯ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. 
ವಿದ್ಯಾರ್ಥಿನಿ ಶಾಲೆಗೆ ಹೊರಡುವ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಒಂದು ದಿಕ್ಕಿನ ಕೋಣೆಗೆ ತೆರಳಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಈ ವೇಳೆ ಪಕ್ಕದ ಮನೆಯವರು ಬೆಂಕಿಯನ್ನು ಕಂಡು ಮನೆ ಬಳಿ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಾಲಕಿಯನ್ನು ಚಿಕಿತ್ಸೆ ಸಲುವಾಗಿ ಮಣಿಪಾಲದ ಖಾಸಗಿ ಆಸ್ಪತ್ರೆ ಕೊಂಡೊಯ್ದರೂ ಕೂಡ ಸುಟ್ಟ ಗಂಭೀರ ಗಾಯದಿಂದಾಗಿ ಆಕೆ ಮೃತಪಟ್ಟಿದ್ದಾಳೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.