![UDUPI : ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ; ಚಿಲ್ಲರೆ ಬಿಟ್ಟು ನೋಟು ಕಳವು UDUPI : ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ; ಚಿಲ್ಲರೆ ಬಿಟ್ಟು ನೋಟು ಕಳವು](https://lh3.googleusercontent.com/-MCtAagqPrCo/YvE5Z6-WmeI/AAAAAAAADPo/GxTJf1Sy-cADGe3NZEB0JmRGOL13VYEzwCNcBGAsYHQ/s1600/1659976030216890-0.png)
UDUPI : ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ; ಚಿಲ್ಲರೆ ಬಿಟ್ಟು ನೋಟು ಕಳವು
Monday, August 8, 2022
ಉಡುಪಿ ಜಿಲ್ಲೆಯ ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿ ಕಳವು ಮಾಡಿದ್ದಾರೆ. ಬೆಳಗ್ಗಿನ ಜಾವ ಸುಮಾರು 3 ಗಂಟೆಯ ಹೊತ್ತಿಗೆ ದೇಗುಲದ ಉತ್ತರ ಭಾಗದ ಬೀಗ ಒಡೆದು ದೇವಸ್ಥಾನದ ಒಳಗೆ ನುಗ್ಗಿದ ಖದೀಮರು, ಕಾಣಿಕೆ ಡಬ್ಬಿಯನ್ನು ಒಡೆದು ಚಿಲ್ಲರೆ ಹಣ ಬಿಟ್ಟು ನೋಟುಗಳನ್ನು ಕದ್ಯೊಯಿದ್ದಾರೆ.
ಬೆಳಗ್ಗಿನ ಜಾವ ವಾಚ್ ಮ್ಯಾನ್ ನಿದ್ರೆಗೆ ಜಾರಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ ಎಚ್ಚರವಾಗುವ ಸಮಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಕಾಪು ಪೊಲೀಸರಿಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.