UDUPI : ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
Thursday, August 18, 2022
ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಮೀನುಗಾರರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ನಡೆದಿದೆ.
ಹೊಸಹಿತ್ತು ನಿವಾಸಿ ನಾರಾಯಣ(60) ಮೃತ ಮೀನುಗಾರ. ನಾರಾಯಣ ಅವರು, ದೋಣಿಯಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ಹೋಗಿದ್ದು, ಈ ವೇಳೆ ಕುಸಿದು ಸಮುದ್ರಕ್ಕೆ ಬಿದ್ದಿದ್ದಾರೆ.
ಇತರೆ ಮೀನುಗಾರರು ಮೇಲಕ್ಕೆ ಎತ್ತಿ ತಕ್ಷಣ
ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.