ಇಂದ್ರಾಳಿ ರೈಲು ಹಳಿಯ ಬಳಿ ಗಾಯಗೊಂಡು ಬಿದ್ದಿರುವ ಬಗ್ಗೆ ರೈಲ್ವೇ ಅಧಿಕಾರಿಗಳಿಂದ ಮಾಹಿತಿ ತಿಳಿದು ಪತ್ನಿ ಹಾಗೂ ಮನೆಯವರು ಸ್ಥಳಕ್ಕೆ ಹೋಗಿ ನೋಡಿದಾಗ ಸುರೇಶ ಮೃತಪಟ್ಟಿದ್ದರು. ಮಂಗಳೂರು-ಕುಂದಾಪುರ ರೈಲು ಹಳಿಯಲ್ಲಿ ನಡೆದುಕೊಂಡು ಯಾವುದೋ ರೈಲು ಢಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.