
UDUPI : ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
ವೈಯಕ್ತಿಕ ಕಾರಣದಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳೆ ಗ್ರಾಮದಲ್ಲಿ ನಡೆದಿದೆ.
ಬೆಳ್ಳೆ ಗ್ರಾಮದ ತೋಟದಮನೆ ಅಬ್ಲಿಕಟ್ಟೆ ನಿವಾಸಿ ವಾಸು ಪೂಜಾರಿ ಎಂಬವರ ಮಗಳು ಸೌಮ್ಯ ಪೂಜಾರಿ(27) ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಆತ್ಮಹತ್ಯೆಗೆ ವೈಯಕ್ತಿಕ ಕಾರಣ ಅಂತ ಹೇಳಲಾಗಿದ್ದು, ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ