
UDUPI : ಅಪಘಾತದಲ್ಲಿ ಗಂಭೀರ ಗಾಯಗೊಂಡ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವು
Thursday, September 15, 2022
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲದಲ್ಲಿ ನಿನ್ನೆ ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ತಂದೆ ಸಾವನ್ಪಿ, ಗಂಭೀರ ಗಾಯಗೊಂಡದ್ದ ಮಗ ಇಂದು ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಸಾವನ್ಪಿದ್ದಾನೆ.
ಸಮರ್ಥ್ ಪೊದ್ದಾ ಸಾವನ್ಪಿದ ಬಾಲಕ. ಉಚ್ಚಿಲ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಬುಧವಾರ ಬೆಳಗ್ಗೆ ಅಪಘಾತದಲ್ಲಿ ಬೆಳಗಾವಿ ಮೂಲದ ಪ್ರಭಾಕರ್ ಶಂಕರ್ ಪೊದ್ದರವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು, ಅವರ ಮಗ ಸಮರ್ಥ್ ಪೊದ್ದಾ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ. ಕಾಪು ಬಳಿಯ ಆನೆಗುಂದಿ ಸರಸ್ವತಿ ಪೀಠದಿಂದ ಗಣೇಶನ ಹಬ್ಬಕ್ಕೆ ರಜೆಯಲ್ಲಿ ಊರಿಗೆ ತೆರಳಿದ್ದ ಏಳನೇ ತರಗತಿಯ ಸಮರ್ಥ್, ಮಂಗಳವಾರ ಸಂಜೆ ಬೆಳಗಾವಿಯ ಹುಕ್ಕೇರಿ ಭಗವಾನ್ ಗಲ್ಲಿಯ ನಿವಾಸಿ ತಂದೆ ಪ್ರಭಾಕರ್ ಅವರೊಂದಿಗೆ ಹೊರಟವರು ಉಚ್ಚಿಲಕ್ಕೆ ಬುಧವಾರ ಬೆಳಿಗ್ಗೆ ಸರಕಾರಿ ಬಸ್ಸಿನಲ್ಲಿ ಆಗಮಿಸಿದ್ದರು. ಬಸ್ಸಿನಿಂದ ಇಳಿದು ರಸ್ತೆ ಪಕ್ಕ ನಿಂತಿದ್ದಾಗ ಲಾರಿ ತಂದೆ ಮಗನಿಗೆ ಢಿಕ್ಕಿ ಹೊಡೆದಿತ್ತು.