-->

UDUPI : ನೀರಿನಲ್ಲಿ ಮುಳುಗಿ ಯುವಕ ಸಾವು

UDUPI : ನೀರಿನಲ್ಲಿ ಮುಳುಗಿ ಯುವಕ ಸಾವು

ಹೊಳೆಯಲ್ಲಿ ಸ್ನೇಹಿತರ ಜೊತೆ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ  ಸಾವನ್ಪಿದ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ವರಂಗ ಗ್ರಾಮದ ತಲಮನೆ ಎಂಬಲ್ಲಿ ನಡೆದಿದೆ.
ಮುನಿಯಾಲು ಪವನ್ ಆಚಾರ್ಯ(27) ಸಾವನ್ಪಿದ ಯುವಕ. 
ಪವನ್ ಮುದ್ರಾಡಿಯಲ್ಲಿ ಸ್ವಂತ ಅಂಗಡಿಯಲ್ಲಿ ಚಿನ್ನ ಹಾಗೂ ಬೆಳ್ಳಿ ಆಭರಣಗಳ ಕುಸುರಿ ಕೆಲಸ ಮಾಡಿಕೊಂಡಿದ್ದು, ಬುಧವಾರ ಸಂಜೆ ವೇಳೆ ಸ್ನೇಹಿತರ ಜೊತೆ, ತಲಮನೆ ಎಂಬಲ್ಲಿ ಹೊಳೆಯಲ್ಲಿ ಈಜಲು ತೆರಳಿದ್ದ. ಹೊಳೆಯಲ್ಲಿ ಸ್ನೇಹಿತರೊಂದಿಗೆ ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಎಕಿ ನಾಪತ್ತೆಯಾದ ಪವನ್‌ಗಾಗಿ ಸ್ನೇಹಿತರು ಹುಡುಕಾಡಿದಾಗ ಅವರ ಶವವು ಅನತಿದೂರದಲ್ಲಿ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ವಹೆಬ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99