ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಮಠದಲ್ಲಿ ನೇಣು‌ಬಿಗಿದುಕೊಂಡು‌ ಸ್ವಾಮೀಜಿ ಆತ್ಮಹತ್ಯೆ

ರಾಮನಗರ :  ಸ್ವಾಮೀಜಿ ಯೊಬ್ಬರು ಮಠದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯಲ್ಲಿ ‌ನಡೆದಿದೆ.

ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45 ವರ್ಷ) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.


ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದೆ. ಅವರ ಆತ್ಮಹತ್ಯೆಗೆ ನಿಖರ ಕಾರಣ  ಏನು ಎಂಬುದು ತಿಳಿದುಬಂದಿಲ್ಲ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW