![UDUPI : ಗ್ರಾಹಕರ ಸೋಗಿನಲ್ಲಿ ಬಂದು ಉಂಗುರ ಕಳ್ಳತನ UDUPI : ಗ್ರಾಹಕರ ಸೋಗಿನಲ್ಲಿ ಬಂದು ಉಂಗುರ ಕಳ್ಳತನ](https://lh3.googleusercontent.com/-OCBoNahqHbI/Y0VCsY1CtuI/AAAAAAAAEhQ/GjszXQ8AaKMrjh_q8eom_ryZpUxD6O3JgCNcBGAsYHQ/s1600/1665483435518518-0.png)
UDUPI : ಗ್ರಾಹಕರ ಸೋಗಿನಲ್ಲಿ ಬಂದು ಉಂಗುರ ಕಳ್ಳತನ
Tuesday, October 11, 2022
ಗ್ರಾಹಕನ ಸೋಗಿನಲ್ಲಿ ಉಡುಪಿ ನಗರದ ಕೆನರಾ ಜ್ಯುವೆಲ್ಲರಿಗೆ ಬಂದ ಕಳ್ಳನೊಬ್ಬ ಉಂಗುರ ಕದ್ದು ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.
ಕೇರಳದ ಕಾಸರಗೋಡಿನ ಸಾಜು ,ಉಂಗುರ ಕದ್ದ ಕಳ್ಳ. ನಗರದ ಕೆನರಾ ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಉಂಗುರ ಬೇಕು ಎಂದು ಕೇಳಿದ್ದಾನೆ. ಅದನ್ನು ತೋರಿಸುವಾಗ ಚೈನ್ ತೋರಿಸಿ ಎಂದಿದ್ದಾನೆ. ಜ್ಯುವೆಲ್ಲರಿಯವರು ಚೈನ್ ತೋರಿಸುವಾಗ ಈತ ಉಂಗುರ ಹಿಡಿದುಕೊಂಡು ಓಡಿದ್ದಾನೆ. ಜ್ಯುವೆಲ್ಲರಿಯ ಮಾಲಕ ಸ್ಥಳೀಯರ ನೆರವಿನಿಂದ ಕಳ್ಳನನ್ನು ಬೆನ್ನಟ್ಟಿ ಹಿಡಿದು ಅವನಿಂದ ಉಂಗುರ ವಾಪಾಸು ಪಡೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.