-->

 ತಂತ್ರಜ್ಞಾನ ಎಂಬುದು ಎರಡು ಅಲಗಿನ ಕತ್ತಿಯಂತೆ: ಡಾ. ಹೆಚ್.ಎಲ್ ಶಶಿರೇಖಾ

ತಂತ್ರಜ್ಞಾನ ಎಂಬುದು ಎರಡು ಅಲಗಿನ ಕತ್ತಿಯಂತೆ: ಡಾ. ಹೆಚ್.ಎಲ್ ಶಶಿರೇಖಾ




ಮಂಗಳೂರು: ತಂತ್ರಜ್ಞಾನ ಎನ್ನುವುದು ಕತ್ತಿ ಇದ್ದಂತೆ ಅದು ಎಷ್ಟು ಉಪಯುಕ್ತವೋ ಅಷ್ಟೇ ಅಪಾಯಕಾರಿಯೂ ಹೌದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಗಣಕವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಹೆಚ್ ಎಲ್ ಶಶಿರೇಖಾ ಅಭಿಪ್ರಾಯಪಟ್ಟರು. 


ನಗರದ ವಿಶ್ವವಿದ್ಯಾಲಯ ಕಾಲೇಜಿನ ಡಾ ಶಿವರಾಮ ಕಾರಂತ ಸಭಾಭವನದಲ್ಲಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು ಐಕ್ಯೂಎಸಿ ಜಂಟಿಯಾಗಿ ಮಂಗಳವಾರ ಆಯೋಜಿಸಿದ್ದ ಕೇಂದ್ರ ಗೃಹ ಸಚಿವಾಲಯ ಆರಂಭಿಸಿರುವ ʼಸೈಬರ್ ಜಾಗೃತಿ ದಿವಸʼ ಆಚರಣೆ ಮತ್ತು “ಸೈಬರ್ ಅಪರಾಧ ಮತ್ತು ಸೈಬರ್ ಸುರಕ್ಷತೆ ಜಾಗೃತಿ”  ಕುರಿತ ವಿಶೇಷ ಉಪನ್ಯಾಸ ಕರ‍್ಯಕ್ರಮದಲ್ಲಿ  ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಅವರು, ಯುವ ಸಮುದಾಯದ ಮೇಲೆ ಸೈಬರ್ ಅಪರಾಧದಿಂದ ಆಗುತ್ತಿರುವ ಅಪಾಯದ ಬಗ್ಗೆ ಮಾಹಿತಿ ನೀಡಿದರು. ಕರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ ವಹಿಸಿ ಸೈಬರ್ ಕ್ರೈಂ ಎಂಬುದು ಮಾನವ ನರ‍್ಮಿತ ಕೂಪ. ಅದರಿಂದ ಯುವ ಜನಾಂಗ ಎಚ್ಚರಿಕೆಯಿಂದ ಇರಬೇಕು, ಎಂದರು. 


ಸರ‍್ವಜನಿಕರಲ್ಲಿ ಸೈಬರ್ ನರ‍್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು, ಸೈಬರ್ ಅಪರಾಧವನ್ನು ತಡೆಗಟ್ಟುವುದು ಕರ‍್ಯಕ್ರಮದ ಉದ್ದೇಶವಾಗಿತ್ತು. ಕಾನೂನು ಜಾರಿ ಸಂಸ್ಥೆಗಳ ಜೊತೆ ಸಮನ್ವಯವನ್ನು ಸುಧಾರಿಸುವ ಉದ್ದೇಶದಿಂದ ಗೃಹ ಸಚಿವಾಲಯ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರವನ್ನು ಪ್ರಾರಂಭಿಸಿದೆ. ಸೈಬರ್ ಕ್ರೈಮ್ ಘಟನೆಗಳ ಆನ್ಲೈನ್ ವರದಿ ಮಾಡಲು ಇದು ರಾಷ್ಟ್ರೀಯ ಸೈಬರ್ ಕ್ರೈಮ್ ರಿಪರ‍್ಟಿಂಗ್ ಪರ‍್ಟಲ್ (ಎನ್ಸಿರ‍್ಪಿ) ಅನ್ನು ಸಹ ಪ್ರಾರಂಭಿಸಿದೆ.


ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ವೀರಭದ್ರಪ್ಪ ಅತಿಥಿಗಳನ್ನು ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕ ಡಾ. ಸಿದ್ದರಾಜು ಎಂ ಎನ್ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಿಕೆ ಡಾ. ಭಾರತಿ ಪಿಲಾರ್ ಕರ‍್ಯಕ್ರಮ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99