-->
ದ.ಕ.ಜಿಲ್ಲಾ ಸಮಿತಿ  NSUI ಪ್ರಧಾನ ಕಾರ್ಯದರ್ಶಿಯಾಗಿ ಸಫ್ವಾನ್ ಆಯ್ಕೆ

ದ.ಕ.ಜಿಲ್ಲಾ ಸಮಿತಿ NSUI ಪ್ರಧಾನ ಕಾರ್ಯದರ್ಶಿಯಾಗಿ ಸಫ್ವಾನ್ ಆಯ್ಕೆ

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ರವಿವಾರ ನಡೆದ ದ.ಕ.ಜಿಲ್ಲಾ ಸಮಿತಿ ಎನ್.ಎಸ್.ಯು.ಐ "ಚಿಂತನ-ಮಂಥನ" ಕಾರ್ಯಕಾರಿಣಿ ಸಭೆಯಲ್ಲಿ ಸಫ್ವಾನ್ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಯಿತು.


 



ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುದ್ರೋಳಿ ಮೂಲದ ಸಫ್ವಾನ್ ಅವರು ಕಳೆದ 3 ವರ್ಷಗಳಿಂದ ಎನ್‌.ಎಸ್‌.ಯು.ಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯರಾಗಿರುವ ಇವರು ವಿದ್ಯಾರ್ಥಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ.  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಆದೇಶ ಪ್ರತಿ ವಿತರಿಸಿದರು.


 


ಈ ಸಂದರ್ಭ ಎನ್‌ಎಸ್‌ಯುಐ ಕರ್ನಾಟಕ ರಾಜ್ಯಾಧ್ಯಕ್ಷ ಗಣೇಶ್ ಕೀರ್ತಿ, ಪ್ರಧಾನ ಕಾರ್ಯದರ್ಶಿ ಭರತ್ ರಾಮ್ ಗೌಡ, ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ,ಎನ್‌ಎಸ್‌ಯುಐ ಕರ್ನಾಟಕ ಉಪಾಧ್ಯಕ್ಷ ಫಾರೂಕ್ ಬಯಾಬೆ, ಪ್ರಧಾನ ಕಾರ್ಯದರ್ಶಿ ಸುಹಾನ್ ಆಳ್ವ ಉಪಸ್ಥಿತರಿದ್ದರು.


Ads on article

Advertise in articles 1

advertising articles 2

Advertise under the article