-->

UDUPI : ಚಾಲಕ ನಿಯಂತ್ರಣ ತಪ್ಪಿದ ಕಾರು, ಮಹಿಳೆಗೆ ಢಿಕ್ಕಿ : ಭೀಕರ ಅಪಘಾತ ಸಿಸಿ ಕ್ಯಾಮರಾದಲ್ಲಿ ಸೆರೆ

UDUPI : ಚಾಲಕ ನಿಯಂತ್ರಣ ತಪ್ಪಿದ ಕಾರು, ಮಹಿಳೆಗೆ ಢಿಕ್ಕಿ : ಭೀಕರ ಅಪಘಾತ ಸಿಸಿ ಕ್ಯಾಮರಾದಲ್ಲಿ ಸೆರೆ


ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದ, ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ
ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಘಟನೆಯಲ್ಲಿ ಮಹಿಳೆ ಸ್ಥಿತಿ ಚಿಂತಾಜನಕವಾಗಿದೆ. ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಜಯಂತಿ ಶೆಟ್ಟಿ (50)  ಗಂಭೀರ ಗಾಯಗೊಂಡ ಮಹಿಳೆ.
ಸುರತ್ಕಲ್ ಕೃಷ್ಣಾಪುರದಿಂದ ಮೂಡಬಿದ್ರೆಯ ತೋಡಾರ್ ಕಡೆಗೆ ಹೋಗುತ್ತಿದ್ದ ಕಾರು ಕಿನ್ನಿಗೋಳಿ ರಾಜ್ಯ ಹೆದ್ದಾರಿ ಎಂಸಿಸಿ ಬ್ಯಾಂಕ್ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ತೀರಾ ಬಲ ಬದಿಗೆ ಚಲಿಸಿದೆ. 





ಈ ವೇಳೆ ಎದುರಿಗೆ ನಡೆದು ಬರುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಾರಿ ಬಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು  ಆಸ್ಪತ್ರೆಗೆ ಸಾಗಿಸಿದ್ದಾರೆ.  ಕಾರಿನಲ್ಲಿದ್ದ ಚಾಲಕ ಕೆ.ಹೆಚ್ ಅಬ್ದುಲ್ ಖಾದರ್ (65), ರಿದಾ (16), ರಶ್ಮಿ (18) ಹಾಗೂ ಕೌಸರ್ (46) ಅವರನ್ನು ಕಿನ್ನಿಗೊಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಭೀಕರ ದೃಶ್ಯ ಪಕ್ಕದ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.



Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99