-->

ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ 18 ನೇ ಕಾರ್ಯಕ್ರಮ

ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ 18 ನೇ ಕಾರ್ಯಕ್ರಮ

ಪುತ್ತೂರು: ಇಲ್ಲಿನ  ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ರೋಟರಿ  ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ  ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 18ನೇ ಯೋಜನೆ 'ಒಳಿತು ಮಾಡು ಮನುಷ' ಕಾರ್ಯಕ್ರಮವು ನವೆಂಬರ್  30ರಂದು ಪುತ್ತೂರಿನ 'ರೋಟರಿ ಟ್ರಸ್ಟ್ ಹಾಲ್'ನಲ್ಲಿ ನಡೆಯಿತು.      


   ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ   ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕರಾದ ದಂಬೆಕ್ಕನ ಸದಾಶಿವ ರೈ  ಮಾತನಾಡಿ  ಈ ಕಾರ್ಯಕ್ರಮದಲ್ಲಿ ಮಾನವೀಯತೆ ಮತ್ತು ಮನುಷ್ಯತ್ವ ಕಂಡುಬರುತ್ತಿದೆ.ಯಾರು ಕಷ್ಟದಲ್ಲಿ ಇದ್ದಾರೋ ಯಾರು ಕಣ್ಣೀ ರಲ್ಲಿ ಇದ್ದಾರೋ ಯಾರು ದುಃಖ ದಲ್ಲಿ ಇದ್ದಾರೋ ಅವರಿಗೆ ಒಂದು ಸಹಾಯ ಹಸ್ತ ಇಲ್ಲಿ ಎದ್ದು ಕಾಣುತಿದೆ. ಇವರ ತಂಡ ಒಳ್ಳೆ ಕೆಲಸವನ್ನು ಮಾಡುತ್ತಿದ್ದಾರೆ.ಅವರೊಟ್ಟಿಗೆ ಯಾರು ಶಕ್ತಿವಂತರಿದ್ದರೋ ಅವರು ಈ ಕಾರ್ಯಕ್ರಮವನ್ನು ಮುಂದುವರಿಸುವುದು ತುಂಬಾ ಅವಶ್ಯಕತೆ ಇದೆ ಎಂದರು.


ಇನೋರ್ವ ಮುಖ್ಯ ಅತಿಥಿ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ದಿವ್ಯ ಪ್ರಭಾ ಚಿಲ್ತಾಡ್ಕ ಮಾತನಾಡಿ ನಾವು ಸಮಾಜದಲ್ಲಿ ಒಳ್ಳೆ ಕೆಲಸ ಮಾಡುತ್ತಿದ್ದೇವೆ ಎಂದರೆ ಅದು  ದೈವನಿಮಿತ್ತ.ಯಾವುದೇ ಫಲಾಪೇಕ್ಷೆ ಯಿಲ್ಲದೆ ಸ್ವಾರ್ಥ ವಿಲ್ಲದೆ,ಪ್ರಚಾರವಿಲ್ಲದೆ ಒಬ್ಬ ಮನುಷ್ಯ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಅದರಿಂದ ಸಿಗುವ ಆತ್ಮ ತೃಪ್ತಿಯೇ ದೇವರ ವರವಾಗಿರುತ್ತದೆ. ಆ ಕೆಲಸವನ್ನು ಒಳಿತು ಮಾಡು ಮನುಷ  ತಂಡ ಮಾಡುತ್ತಿದೆ.ಸಮಾಜಕ್ಕೆ ಇನ್ನೂ ಒಳ್ಳೆಯ ಕೆಲಸಗಳನ್ನು ಮಾಡಿ.ನಾವು ತಿನ್ನುವ ಅನ್ನದಿಂದ ಒಂದು ತುತ್ತು ಅನ್ನವನ್ನು ಇನ್ನೊಬ್ಬರಿಗೆ ಕೊಡಬೇಕು ಅದೇ ಮನುಷ್ಯತ್ವದ ಗುಣ ಎಂದರು.ಹಾಗೂ ಪ್ರತಿ ತಿಂಗಳು ನನ್ನ ಕೈಲಾದ  ಸಹಾಯವನ್ನು ಮಾಡುತ್ತೇನೆ ಎಂದು ಹೇಳಿದರು .

ಇನೋರ್ವ ಮುಖ್ಯ ಅತಿಥಿಗಳಾದ ಪೆರ್ಲಂಪಡಿಯಾ ಶ್ರೀ ಹರಿಪ್ರಸಾದ್ರವರು ಮಾತನಾಡಿ ಒಳಿತು ಮಾಡು ಮನುಷ ಬಹಳ ಒಳ್ಳೆಯ ಕಾರ್ಯಕ್ರಮ.ಜನರಿಗೆ ತುಂಬಾ ಸಹಾಯ ಆಗುತ್ತಿದೆ.ದಾನ, ಧರ್ಮ,ಮಾಡುವುದರಿಂದ ನಮ್ಮ ಅವಶ್ಯಕತೆಗೆ ಯಾವುದೇ ಸಮಸ್ಯೆ ಗಳು ಆಗುವುದಿಲ್ಲ.ಏನು ನಮಗೆ ದೇವರು ಕೊಟ್ಟಿದ್ದಾನೋ ಅದನ್ನು ಅಶಕ್ತರಿಗೆ ದಾನ ಮಾಡಿದರೆ ದೇವರು ಮೆಚ್ಚುವಂತಹ ಕೆಲಸ ಮಾಡಿದಂತೆ.ಎಲ್ಲ ಸಹೃದಯಿಗಳು ಇವರ ಜೊತೆಗೆ ಕೈ ಜೋಡಿಸಿಕೊಂಡು ಸ್ವಲ್ಪ ಮಟ್ಟಿನ ಸಹಾಯ ಮಾಡಿದರೆ ಅಶಕ್ತರಿಗೆ ಅನಾರೋಗ್ಯ ವಂತರಿಗೆ ತುಂಬಾ ಹೆಚ್ಚಿನ ಸಹಾಯವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮ ದಲ್ಲಿ 52,000 ಸಾವಿರ ಮೊತ್ತದ 52ಆಹಾರ ಕಿಟ್ ವಿತರಣೆ ಮಾಡಲಾಯಿತು.ಹಾಗೂ 40 ಜನರಿಗೆ ಬಿಪಿ, ಶುಗರ್ ತಪಾಸಣೆ ಹಾಗೂ 2 ಜನರು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ  ಪದಾಧಿಕಾರಿಗಳದ  ಕಲಾವಿದ ಕೃಷ್ಣಪ್ಪ ಶಿವನಗರ,JC ಚೇತನ್ ಕುಮಾರ್ ಪುತ್ತೂರು, ಶ್ರೀಮತಿ ಶೋಭಾ ಮಡಿವಾಳ ಹಾಗೂ ಸದಸ್ಯರು ಹಾಜರಿದ್ದರು.
ಪ್ರಾಥನೆಯನ್ನು ಶುಭ, ಮಾಲಿನಿ,ಸ್ವಾಗತವನ್ನು ಶೀಲಾ, ಧನ್ಯವಾದವನ್ನು ಮಮತಾ ಹಾಗೂ ಕು.ಸೌಜನ್ಯಾ ಅರ್ಲಪದವು ಕಾರ್ಯಕ್ರಮ ವನ್ನೂ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99