-->
  ಮಂಗಳೂರಿನ ವೈದ್ಯಲೋಕದಲ್ಲಿ ಗಾಂಜಾ ಲೋಕ! :ಇಬ್ಬರು ವೈದ್ಯರನ್ನು ವಜಾಗೊಳಿಸಿದ ಕೆಎಂಸಿ

ಮಂಗಳೂರಿನ ವೈದ್ಯಲೋಕದಲ್ಲಿ ಗಾಂಜಾ ಲೋಕ! :ಇಬ್ಬರು ವೈದ್ಯರನ್ನು ವಜಾಗೊಳಿಸಿದ ಕೆಎಂಸಿ

ಮಂಗಳೂರು: ಮಂಗಳೂರಿನಲ್ಲಿ ಗಾಂಜಾ ಪ್ರಕರಣದಲ್ಲಿ ವೈದ್ಯರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾಗೊಳಿಸಿದೆ. ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್ ಅವರನ್ನು ಆಡಳಿತ ಮಂಡಳಿ ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ.

ಉಳಿದ 7 ವೈದ್ಯಕೀಯ ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳಾದ ಡಾ.ನದೀಯಾ ಸಿರಾಜ್, ಡಾ.ವರ್ಷಿಣಿ ಪ್ರತಿ, ಡಾ.ರಿಯಾ ಚಾ ಡಾ.ಇರಾ ಬಾಸಿನ, ಡಾ.ಕ್ಷಿತಿಜ್ ಗುಪ್ತಾ ಹಾಗೂ ಡಾ.ವಿ.ಎಸ್.ಹರ್ಷಕುಮಾರ್ ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಕೆಎಂಸಿ ಡೀನ್ ಉನ್ನಿಕೃಷ್ಣನ್ ಮಾಹಿತಿ ನೀಡಿದ್ದಾರೆ.

ಪಿಜಿ, ಹಾಸ್ಟೆಲ್‌ಗಳಲ್ಲಿದ್ದ ಯುವತಿಯರು, ತಮ್ಮ ಬಾಯ್ ಫ್ರೆಂಡ್‌ಗಳ ಜತೆ ಅಪಾರ್ಟ್‌ಮೆಂಟ್‌ಗೆ ಶಿಫ್ಟ್ ಆಗಿದ್ದರು ಎಂಬ ಸಂಗತಿ ಪೊಲೀಸರ ತನಿಖೆ ವೇಳೆ ಬಯಲಾಗಿತ್ತು. ಇವರು ಓವರ್‌ನೈಟ್ ಪಾರ್ಟಿಯಲ್ಲಿ ಡಾಕ್ಟರ್ಸ್, ಪ್ಯೂಡೆಂಟ್‌ಗಳೆಲ್ಲ ಗಾಂಜಾ ಎಳಿಯುತ್ತಿದ್ದ ಬಗ್ಗೆ. ಲೇಟ್ ನೈಟ್ ಪಾರ್ಟಿ ಬಗ್ಗೆ ಅನೇಕ ಸಲ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು

Ads on article

Advertise in articles 1

advertising articles 2

Advertise under the article