-->

ನನ್ನ ಗಂಡನನ್ನು MLA  ಮಾಡು ದೇವರೇ.. ಬಿಜೆಪಿ ಅಭ್ಯರ್ಥಿ ಪತ್ನಿಯಿಂದ ಹರಕೆ

ನನ್ನ ಗಂಡನನ್ನು MLA ಮಾಡು ದೇವರೇ.. ಬಿಜೆಪಿ ಅಭ್ಯರ್ಥಿ ಪತ್ನಿಯಿಂದ ಹರಕೆ

 


ಕೋಲಾರ : ಮಾಲೂರು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ  ಗುರುತಿಸಿಕೊಂಡಿರುವ ಹೂಡಿ ವಿಜಯ್ ಕುಮಾರ್ ಅವರ ಪತ್ನಿ ಶ್ವೇತಾ ಅವರು, ಮಾಲೂರಿನ ಮಾರಿಯಮ್ಮ ತಾಯಿಗೆ ಪತ್ರ ಬರೆದು ತನ್ನ ಗಂಡನನ್ನು MLA  ಮಾಡುವಂತೆ ಬೇಡಿಕೊಂಡಿದ್ದಾರೆ.

 

 ಅಲ್ಲದೇ ಸೊಣಪನಹಟ್ಟಿಯಲ್ಲಿ ನಡೆದ ಬಸವಣ್ಣನ ಜಾತ್ರೆಯಲ್ಲಿ  ಕೂಡ ಗಂಡನಿಗೆ ತಾಲೂಕಿನ ಜನರ ಸೇವೆ ಮಾಡಲು ಅವಕಾಶ ಕಲ್ಪಿಸುವಂತೆ ವಿಶೇಷ ಹರಕೆಯನ್ನು ಕಟ್ಟಿಕೊಂಡಿದ್ದಾರೆ.

 

ಸೊಣಪನಹಟ್ಟಿಯಲ್ಲಿ ಬಸವಣ್ಣನ ಜಾತ್ರಾ ಮಹೋತ್ಸವದಲ್ಲಿ ವಿಶೇಷ ಆಚರಣೆಯೊಂದು ನಡೆದುಕೊಂಡು ಬರುತ್ತಿದೆ.  ಯಾರಾದರೂ ಭಕ್ತಿಯಿಂದ ತಮ್ಮ ಮನದ ಆಸೆಯನ್ನು ಬಾಳೆಹಣ್ಣಿನ ಮೇಲೆ ಬರೆದು ಅಥವಾ ಮನಸ್ಸಿನಲ್ಲಿ ಹರಕೆ ಕಟ್ಟಿಕೊಂಡು ದೇವರ ರಥದ ಮೇಲೆ ಎಸೆದರೆ ಮುಂದಿನ ಜಾತ್ರೆಯ ಹೊತ್ತಿಗೆ ಹರಕೆ ಫಲಿಸುತ್ತದೆ ಎಂಬ ನಂಬಿಕೆ ಸಾರ್ವತ್ರಿಕವಾಗಿ ಇದೆ.

 


ಹಾಗಾಗಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ರಾಜ್ಯದ ವಿವಿದೆಡೆಯಿಂದ ಜಾತ್ರೆಗೆ  ಬರುವ ಭಕ್ತರು ಬಸವಣ್ಣ ದೇವರ ರಥಕ್ಕೆ ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಬೇಡಿಕೆಗಳನ್ನು ಪೂರೈಸುವಂತೆ ವಿನಂತಿಸುತ್ತಾರೆ.

 


ಜಾತ್ರೆಗೆ ಬಂದಿದ್ದ ಹೂಡಿ ವಿಜಯ್ ಕುಮಾರ್ ಅವರ ಪತ್ನಿ ಶ್ವೇತಾ ಅವರು ಇಲ್ಲಿನ ರಾಸುಗಳಿಗೆ ಮೇವು  ನೀಡಿದ ಬಳಿಕ ಬಸವಣ್ಣನ ಆಶೀರ್ವಾದ ಪಡೆದು ನನ್ನ ಪತಿ ವಿಜಯ್ ಕುಮಾರ್‌ರನ್ನು  MLA ಮಾಡುವಂತೆ ಬಾಳೆಹಣ್ಣಿನ ಮೇಲೆ ಬರೆದು ರಥದ ಮೇಲೆ ಎಸೆದಿದ್ದಾರೆ. ಜೊತೆಗೆ ಶಕ್ತಿ ದೇವತೆ ಮಾಲೂರಿನ ಮಾರಿಕಾಂಬಾ ದೇವಿಗೆ ಹರಕೆ ಪತ್ರವನ್ನು ಬರೆದು ಹುಂಡಿಗೆ ಹಾಕಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99