-->

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಬ್ಬರು ಪಿಎಫ್‌ಐ ಮುಖಂಡರ ಸುಳಿವು ನೀಡಿದರೆ ರೂ.5 ಲಕ್ಷ ಬಹುಮಾನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಬ್ಬರು ಪಿಎಫ್‌ಐ ಮುಖಂಡರ ಸುಳಿವು ನೀಡಿದರೆ ರೂ.5 ಲಕ್ಷ ಬಹುಮಾನ

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ 5 ಲಕ್ಷ ರೂ. ಬಹುಮಾನ ಘೋಷಿಸಿದೆ.
ಇಬ್ಬರು ನಿಷೇಧಿತ ಪಿಎಫ್‌ಐ ಸಂಘಟನೆ ಮುಖಂಡರ ಪತ್ತೆಗೆ 5ಲಕ್ಷ ರೂ. ಘೋಷಣೆ ಮಾಡಲಾಗಿದೆ. ಪಿಎಫ್‌ಐ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್(48) ಹಾಗೂ ನೆಕ್ಕಿಲಾಡಿಯ ಮಸೂದ್ ಪತ್ತೆಗೆ ಬಹುಮಾನ ಘೋಷಣೆಯಾಗಿದೆ ಸುಳಿವು ನೀಡಿದವರ ಮಾಹಿತಿ
ಗೌಪ್ಯವಾಗಿಡುವುದಾಗಿ ರಾಷ್ಟ್ರೀಯ ತನಿಖಾ ದಳ ಪ್ರಕಟಣೆ ಹೊರಡಿಸಿದೆ.
ಈ ಹಿಂದೆ ತಲೆ ಮರೆಸಿಕೊಂಡ 4 ಪ್ರಮುಖ ನಾಲ್ವರು ಅರೋಪಿಗಳ ಸುಳಿವು ನೀಡಿದವರಿಗೆ ಒಟ್ಟು 14 ಲಕ್ಷ
ನಗದು ಬಹುಮಾನ ಘೋಷಣೆ ಮಾಡಿತ್ತು. ಮೊಹಮ್ಮದ್ ಮುಸ್ತಫಾಗೆ 5 ಲಕ್ಷ ತುಫೈಲ್ ಗೆ 5 ಲಕ್ಷ ಉಮರ್ ಫಾರೂಕ್ ಗೆ 2 ಲಕ್ಷ ಅಬುಬಕರ್ ಸಿದ್ದಿಕ್ ಗೆ 2 ಲಕ್ಷ ಘೋಷಿಸಿತ್ತು.
ಮೂವರು ದಕ್ಷಿಣ ಕನ್ನಡ ಹಾಗೂ ಓರ್ವ ಕೊಡಗು ಮೂಲದ ಆರೋಪಿಗಳು. ದ.ಕ ಜಿಲ್ಲೆ ಸುಳ್ಯ ತಾಲ್ಲೂಕು ಬೆಳ್ಳಾರೆ ಬೂಡುಮನೆ ನಿವಾಸಿ ಮೊಹಮ್ಮದ್ ಮುಸ್ತಫಾ, ಕೊಡಗು ಜಿಲ್ಲೆ ಮಡಿಕೇರಿ ನಗರದ ಗದ್ದಿಗೆ ನಿವಾಸಿ ತುಫೈಲ್ ಎಂ ಹೆಚ್, ದ.ಕ ಜಿಲ್ಲೆ ಸುಳ್ಯ ನಗರದ ಕಲ್ಲುಮುಟ್ಟು ನಿವಾಸಿ ಉಮ್ಮರ ಫಾರೂಕ್. ದ.ಕ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಆಗಿದ್ದರು. ನಾಲ್ವರು ನಿಷೇಧಿತ PFI ಕಾರ್ಯಕರ್ತರು ಪ್ರವೀಣ್ ಹತ್ಯೆ ಪ್ರಕರಣದ ಆರೋಪಿಗಳಾಗಿದ್ದಾರೆ. ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99