-->
UDUPI : ಭೀಕರ ರಸ್ತೆ ಅಪಘಾತ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

UDUPI : ಭೀಕರ ರಸ್ತೆ ಅಪಘಾತ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಲಾರಿಯೊಂದನ್ನು ಒವರ್ ಟೇಕ್ ಮಾಡುವ ಸಂದರ್ಭ, ಹಿಂದಿನಿಂದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಇಬ್ಬರು ವಿದ್ಯಾರ್ರ್ಥಿಗಳು ಸ್ಥಳದಲ್ಲೇ ಸಾವನಪ್ಪಿದ ಘಟನೆ ಉಡುಪಿಯ ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ 66  ಮಂಜುನಾಥ ಪೆಟ್ರೋಲ್ ಬಂಕ್ ಬಳಿ ನಡೆದಿದೆ.  ಸಾಲಿಗ್ರಾಮ ಸಮೀಪದ ಸಮಿತ್ ಕುಮಾರ್ ಎಮ್ ಜಿ (19) ಮತ್ತು ವಾಗೀಶ್ ಕೆದ್ಲಾಯ (19) ಮೃತ ವಿದ್ಯಾರ್ಥಿಗಳು.
 ಸಾವನ್ಪಿದ ವಿದ್ಯಾರ್ಥಿಗಳು ಉಡುಪಿಯ ಖಾಸಗಿ ಸಂಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.  ಉಡುಪಿಯಿಂದ ಕಾಲೇಜು ಮುಗಿಸಿ ಬೈಕಿನಲ್ಲಿ ವಾಪಾಸಾಗುತ್ತಿದ್ದ ವೇಳೆ ಲಾರಿಯನ್ನು ಒವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಲಾರಿಗೆ ಡಿಕ್ಕಿ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿದ್ದು ರಸ್ತೆಗೆ ಅಪ್ಪಳಿಸಿದ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article