![ಪುಲ್ವಾಮಾ ದಾಳಿಗೆ ನಾಲ್ಕು ವರ್ಷ : ಭಾರತೀಯರು ಎಂದೂ ಮರೆಯದ ದುಃಸ್ವಪ್ನ ಪುಲ್ವಾಮಾ ದಾಳಿಗೆ ನಾಲ್ಕು ವರ್ಷ : ಭಾರತೀಯರು ಎಂದೂ ಮರೆಯದ ದುಃಸ್ವಪ್ನ](https://lh3.googleusercontent.com/-DZCuVO_f2Wo/Y-soy9KdmVI/AAAAAAAAAOU/UqaT9E0dAss9cwn1mjqTvvkuyeee9dirgCNcBGAsYHQ/s1600/1676355783846090-0.png)
ಪುಲ್ವಾಮಾ ದಾಳಿಗೆ ನಾಲ್ಕು ವರ್ಷ : ಭಾರತೀಯರು ಎಂದೂ ಮರೆಯದ ದುಃಸ್ವಪ್ನ
Tuesday, February 14, 2023
ನವದೆಹಲಿ : ಫೆಬ್ರವರಿ 14 ರಂದು ಜಗತ್ತು ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಂತೆ ನಾಲ್ಕು ವರ್ಷದ ಹಿಂದೆ ಪುಲ್ವಾಮಾದಲ್ಲಿ ಕರಾಳ ಘಟನೆಯೊಂದು ನಡೆದಿತ್ತು. ಅದೇ ಪುಲ್ವಾಮಾ ದಾಳಿ. ಭಾರತೀಯ ಭದ್ರತಾ ಪಡೆಗಳ ಮೇಲೆ ಇಲ್ಲಿಯವರೆಗೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಇದು ಒಂದಾಗಿದ್ದು, 40 ಸಿಆರ್ಪಿಎಫ್ ಯೋಧರು ಈ ದಾಳಿಗೆ ಬಲಿಯಾಗಿದ್ದರು.
ನಾಲ್ಕು ವರ್ಷಗಳ ಹಿಂದೆ, 2019 ಫೆಬ್ರವರಿ 14 ರಂದು, 40 ಸಿಆರ್ಪಿಎಫ್ ಅಧಿಕಾರಿಗಳು ಪ್ರಾಣ ಕಳೆದುಕೊಂಡ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ದೇಶಕ್ಕೆ ದೇಶವೇ ಸ್ತಬ್ದವಾಗಿತ್ತು.ಜೈಶ್-ಎ-ಮೊಹಮ್ಮದ್ ಆತ್ಮಹತ್ಯಾ ಬಾಂಬರ್ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಬೆಂಗಾವಲು ವಾಹನಕ್ಕೆ ಸ್ಫೋಟಕಗಳನ್ನು ತುಂಬಿದ ವಾಹನವನ್ನು ಡಿಕ್ಕಿ ಹೊಡೆದು ಈ ಕೃತ್ಯ ಎಸಗಿದ್ದನು.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 44 ರ ಜಮ್ಮು-ಶ್ರೀನಗರ ವಿಭಾಗದಲ್ಲಿ ಯೋಧರನ್ನು ಹೊತ್ತೊಯ್ಯುತ್ತಿದ್ದ ಸೇನಾ ಟ್ರಕ್ ಮೇಲೆ ಈ ದಾಳಿ ನಡೆದಿತ್ತು. ದಾಳಿಯ ನಂತರ, ಜೈಶ್-ಎ-ಮೊಹಮ್ಮದ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ದಾಳಿಕೋರ ಆದಿಲ್ ಅಹ್ಮದ್ ದಾರ್ ಎಂಬ 22 ವರ್ಷದ ಯುವಕನ ವಿಡಿಯೊವನ್ನು ಪೋಸ್ಟ್ ಮಾಡಿದೆ.
ಭಾರತದ ಭದ್ರತಾ ಪಡೆಗಳ ಮೇಲೆ ಮಾರಣಾಂತಿಕ ದಾಳಿಯ ಕೆಲವು ದಿನಗಳ ನಂತರ, ಭಾರತದ ರಕ್ಷಣಾ ಪಡೆಗಳಿಂದ ಭಯೋತ್ಪಾದನಾ ನಿಗ್ರಹ ವೈಮಾನಿಕ ದಾಳಿ ನಡೆಸಲಾಯಿತು. ಫೆಬ್ರವರಿ 26, 2019 ರ ಮುಂಜಾನೆ, ಭಾರತೀಯ ವಾಯುಪಡೆಯ ಹಲವಾರು ಜೆಟ್ಗಳು ಬಾಲಾಕೋಟ್ನಲ್ಲಿರುವ ಜೈಶ್ ಸಂಘಟನೆಯ ಭಯೋತ್ಪಾದಕ ಶಿಬಿರಗಳ ಮೇಲೆ ಬಾಂಬ್ ದಾಳಿ ಮಾಡಿ ಸುಮಾರು 500 ಭಯೋತ್ಪಾದಕರನ್ನು ಹತ್ಯೆಮಾಡಿತು.
ಬಾಲಾಕೋಟ್ನಲ್ಲಿ ನಡೆದ ವೈಮಾನಿಕ ದಾಳಿಯ ನಂತರ, ಪಾಕಿಸ್ತಾನದ ವಾಯುಪಡೆಯು ಜಮ್ಮು ಮತ್ತು ಕಾಶ್ಮೀರದಲ್ಲಿನ ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಲು ಪ್ರಯತ್ನಿಸಿತು. ಆದರೆ ಈ ಪ್ರಯತ್ನವನ್ನು Toಈ ವಿಫಲಗೊಳಿಸಿತು. ಘರ್ಷಣೆಯ ಸಮಯದಲ್ಲಿ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ವಿಮಾನವನ್ನು ಪಾಕಿಸ್ತಾನದ ಪಡೆಗಳು ಹೊಡೆದುರುಳಿಸಿ ವಶಪಡಿಸಿಕೊಂಡವು. ಆನಂತರ ವರ್ಧಮಾನ್ ಅವರನ್ನು ಪಾಕಿಸ್ತಾನ ಬಿಡುಗಡೆ ಮಾಡಿತು.
ಇಂತಹ ದಾಳಿಗಳನ್ನು ರೂಪಿಸುವ ಮೂಲಕ ಭಾರತವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಹೊಣೆಗಾರರು ಬೆಲೆ ತೆರಬೇಕಾಗುತ್ತದೆ ಎಂದು ಗುಡುಗಿದ್ದರು. ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮುನಲ್ಲಿ ಕರ್ಪೂಗಳಿಗೆ ಹೇರಲಾಗಿತ್ತು. ಭಾರತವು ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ದಾಳಿಯನ್ನು ಪ್ರಾರಂಭಿಸಿತು, ಅಲ್ಲಿ ಜೈಷೆ ಸಂಘಟನೆ ನಡೆಸಿದ ಪುಲ್ವಾಮಾ ದಾಳಿಯ ಬಗ್ಗೆ 25 ದೇಶಗಳ ರಾಯಭಾರಿಗಳಿಗೆ ಮಾಹಿತಿ ನೀಡಲಾಯಿತು. ಜೆಎಂ ಜೊತೆ ಆಪಾದಿತ ಸಂಪರ್ಕ ಹೊಂದಿರುವ ಕನಿಷ್ಠ ಏಳು ಜನರನ್ನು ಪುಲ್ವಾಮಾದಿಂದ ಬಂಧಿಸಲಾಗಿದೆ.