ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

UDUPI : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಯುವಕ‌ ಸಾವು

ಯುವಕನೋರ್ವ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಶಾಲಾ ಮೈದಾನದಲ್ಲಿ ನಡೆದಿದೆ. ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನ ಬಳಿ ನಿವಾಸಿ ಸಂತೋಷ್ (34) ಮೃತ ಯುವಕ. 
ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್ ಆಡುತ್ತಿರುವಾಗ ಮೈದಾನದಲ್ಲಿ ನಿಂತಿದ್ದ ಸಂತೋಷ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸಂತೋಷ್ ಇಲೆಕ್ಟ್ರಿಷನ್ ಕೆಲಸ ನಡೆಸುತ್ತಿದ್ದು, ಇವರಿಗೆ ಕಳೆದ 5 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW