ಭೂ ವ್ಯವಹಾರ ನಡೆಸುತ್ತಿದ್ದ ಯುವಕ, ಕೊಲೆಗೂ ಮೊದಲು ಕೊಲೆಯಾದ ಸ್ಥಳದ ಮುಂಭಾಗದಲ್ಲಿ ನಡೆಯುತ್ತಿದ್ದ ದೈವ ನೇಮದಲ್ಲೂ ಕ್ರಿಯಾಶೀಲನಾಗಿ ಪಾಲ್ಗೊಂಡಿದ್ದ. ಕೋಲದಲ್ಲಿದ್ದ ಶರತ್ನನ್ನು ಮಾತುಕತೆಯ ನೆಪದಲ್ಲಿ ದೂರವಾಣಿ ಕರೆ ಮಾಡಿ ಕರೆಯಿಸಿಕೊಂಡ ಪರಿಚಿತರೇ ಹೆದ್ದಾರಿ ಬದಿ ಕೊಲೆ ಮಾಡಿದ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.