-->

ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ವಾಪಸ್ : ಸಿ.ಎಸ್. ಷಡಕ್ಷರಿ ಘೋಷಣೆ

ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ವಾಪಸ್ : ಸಿ.ಎಸ್. ಷಡಕ್ಷರಿ ಘೋಷಣೆ

ಬೆಂಗಳೂರು : 7 ನೇ ವೇತನ ಆಯೋಗ ನಿಗದಿಪಡಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಪ್ರಸ್ತುತ ರಾಜ್ಯ ಸರ್ಕಾರ ಇಂದು ರಾಜ್ಯ ಸರ್ಕಾರಿ ನೌಕರರಿಗೆ ಶೇ. 17 ವೇತನ ಹೆಚ್ಚಳ ಮಾಡಿ ಮಧ್ಯಂತರ ಪರಿಹಾರ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದೇವೆ. ರಾಜ್ಯ ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚು ಮಾಡಿ ಆದೇಶ, ಪಿಎಸ್ ಬಗ್ಗೆ ಪರಿಶೀಲನೆಗೆ ಸರ್ಕಾರ ಆದೇಶ ಹೊರಡಿಸಿದೆ.

ನಿವೃತ್ತ ನೌಕರರು ಸೇರಿ 15 ಲಕ್ಷ ನೌಕರರಿಗೆ ಅನ್ವಯ. ಎನ್ ಪಿಎಸ್ ಬಗ್ಗೆ ಬೇರೆ ರಾಜ್ಯಗಳಲ್ಲಿ ಅಧ್ಯಯನಕ್ಕೆ ಎಸ್ ಐಎಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ. ಹೀಗಾಗಿ ಸದ್ಯಕ್ಕೆ ಸರ್ಕಾರಿ ನೌಕರರ ಮುಷ್ಕರ ಹಿಂಪಡೆಯುತ್ತೇವೆ ಎಂದು ಹೇಳಿದ್ದಾರೆ.

ಸರ್ಕಾರಿ ನೌಕರರು, ಸರ್ಕಾರ ತದ್ವಿರುದ್ಧವಾಗಿ ಹೋಗುವುದು ಬೇಡ, ಇಬ್ಬರು ಒಟ್ಟಿಗೆ ಹೋಗಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ವೇತನ ಭತ್ಯೆ, ತಾತ್ಕಾಲಿಕ ಪರಿಹಾರ ಸಮ್ಮಿತಿ ನೀಡಿದೆ. ಎನ್ ಪಿಎಸ್ ಅನ್ನು ಓಪಿಎಸ್ ಮಾಡಬೇಕೆಂದು ಬೇಡಿಕೆ ಇಟ್ಟಿದ್ದೇವೆ. OPS ಮಾಡುವ ಕುರಿತು ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಬೇಕು ಎಂದು ಹೇಳಿದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99