-->

UDUPI ;  ಭೀಕರ ಅಪಘಾತ : ಯುವಕ ಸಾವು ಜೊತೆಯಲ್ಲಿದ್ದ ಯುವತಿ ಗಂಭೀರ

UDUPI ; ಭೀಕರ ಅಪಘಾತ : ಯುವಕ ಸಾವು ಜೊತೆಯಲ್ಲಿದ್ದ ಯುವತಿ ಗಂಭೀರ

ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವಿಗೀಡಾಗಿ, ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ  ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಗಡಿ ಭಾಗದಲ್ಲಿ ನಡೆದಿದೆ. ಉಡುಪಿಯ ಬಾರ್ಕೂರು ಮೂಲದ ಶಶಾಂಕ್ ಮೃತ ಯುವಕ. ಆತನ ಜೊತೆಯಲ್ಲಿದ್ದ ಯುವತಿ ನಿರ್ಮೀತಾ ಗಂಭೀರವಾಗಿ ಗಾಯಗೊಂಡಿದ್ದಾರೆ. 
 ಶಿವಮೊಗ್ಗದಿಂದ ಉಡುಪಿ ಕಡೆಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಶಶಾಂಕ್ ಮತ್ತು ನಿರ್ಮಿತಾ ಶಿವಮೊಗ್ಗದಿಂದ ಉಡುಪಿ ಕಡೆಗೆ ಬೈಕ್ ನಲ್ಲಿ ಸಾಗುತ್ತಿದ್ದಾಗ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ಸು ಆಗುಂಬೆ ಘಾಟಿಯ 12ನೇ ತಿರುವಿನ ಬಳಿ ಡಿಕ್ಕಿ ಹೊಡೆದಿದ್ದು, ಯುವಕ ಶಶಾಂಕ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99