UDUPI : ಪಿಕಪ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ; ಓರ್ವ ಸಾವು, ಮತ್ತೋರ್ವ ಗಂಭೀರ
Monday, July 3, 2023
ಪಿಕಪ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊರ್ವ ಗಂಭೀರಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮಾಸ್ತಿಕಟ್ಟೆ ಎಂಬಲ್ಲಿ ನಡೆದಿದೆ.
ರಾಜು ಗೌಡ (46) ಮೃತಪಟ್ಟವರು.
ಪಿಕಪ್ ವಾಹನ ಚಾಲಕ ಗಾಯಾಳು ಶಿವರಾಜ ಅವರನ್ನು ಕುಂದಾಪುರದ ಖಾಸಗಿಗೆ ದಾಖಲು ಮಾಡಲಾಗಿದೆ. ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆಯೆ ಕಾರಣ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಕೊಲ್ಲೂರು ಪೋಲಿಸರು ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ