ಈತ ಖಾಸಗಿ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದನೆನ್ನಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಕೊಲ್ಲೂರಿಗೆ ದರ್ಶನಕ್ಕೆ ಬಂದಿದ್ದ ಕಾಸರಗೋಡು ಮೂಲದ ಸುರತ್ಕಲ್ ನಿವಾಸಿ ಪ್ರವೀಣ್ ಎನ್ನುವರು ಪತ್ನಿಯೊಂದಿಗೆ ಬಂದಿದ್ದರು. ಮನೆಯಲ್ಲಿ ಯಾರು ಇಲ್ಲದ ಕಾರಣ ಪತ್ನಿ ಮನೆಯಲ್ಲಿದ್ದ 13 ½ ಪವನ್ ಚಿನ್ನಾಭರಣಗಳನ್ನು ಚಿಕ್ಕ ಪರ್ಸ್ ನಲ್ಲಿ ಹಾಕಿ ವ್ಯಾನಟಿ ಬ್ಯಾಗ್ ನಲ್ಲಿಟ್ಟುಕೊಂಡು ಬಂದಿದ್ದು ದೇವರ ದರ್ಶನ ಮಾಡಿ ಹೊರಗಡೆ ಬಂದಾಗ ವ್ಯಾನಟಿ ಬ್ಯಾಗ್ ಜೀಪ್ ಓಪನ್ ಆಗಿದ್ದು ಚಿನ್ನಾಭರಣಗಳಿದ್ದ ಚಿಕ್ಕ ಪರ್ಸ್ ಕಳವಾಗಿದ್ದು ಅದರಲ್ಲಿದ್ದ 4 ಲಕ್ಷದ 75 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡ ಕೊಲ್ಲೂರು ಪೊಲೀಸ್ ರು ಪರ್ಸ್ ನಲ್ಲಿದ್ದ 7½ ಪವನ್ ಚಿನ್ನದ ಚೈನ್, 3 ಪವನ್ ತೂಕದ ಎರಡು ಚಿನ್ನದ ಬಳೆ, 1½ ಪವನ್ ಚಿನ್ನದ ಚೈನ್, ½ ಪವನ್ ಚಿನ್ನದ ಬಳೆ, 1 ಪವನ್ ತೂಕದ 4 ಜೊತೆ ಚಿನ್ನದ ಕಿವಿ ಓಲೆ ಸಹಿತ ಒಟ್ಟು 13½ ಪವನ್ (108 ಗ್ರಾಂ) ಆರೋಪಿಯಿಂದ ವಶಕ್ಕೆ ಪಡೆಯಲಾಗಿದೆ.
UDUPI ; ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ಕಳ್ಳತನ ನಡೆಸಿದ ಆರೋಪಿ ಬಂಧನ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸ್ ರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. (32) ಬಂಧಿತ ಆರೋಪಿ.
ಟ್ಯಾಗ್ಗಳು:
STATE