UDUPI : ಬೃಹತ್ ಆಲದ ಮರ ಬಿದ್ದು ಬೈಕ್ ಸವಾರನ ಸಾವು
Friday, July 7, 2023
ಬೃಹತ್ ಆಲದ ಮರ ಬಿದ್ದು ಬೈಕ್ ಸವಾರನ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ನಡೆದಿದೆ. ಬೈಕ್ ಸವಾರ ಪ್ರವೀಣ್ ಆಚಾರ್ಯ ಸಾವನ್ನಪ್ಪಿದ ಯುವಕ.
ನಿನ್ನೆ ರಾತ್ರಿ ವೇಳೆ ಬೆಳ್ಮಣ್ನಲ್ಲಿ ಗಾಳಿ ಮರ ಬರುತ್ತಿತ್ತು. ಈ ವೇಳೆ ಬೈಕ್ ನಲ್ಲಿ ತೆರಳುತ್ತಿದ್ದ ಪ್ರವೀಣ್ ಮೇಲೆ ಏಕಾಏಕಿ ಮರ ಬಿದ್ದು, ಸಾವನ್ನಪ್ಪಿದ್ದಾನೆ. ಮರ ಬೀಳುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.