
ಲಂಚಕ್ಕೆ ಕೈಚಾಚಿದ ತಹಶೀಲ್ದಾರ್ ಬಂಧನ: 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗೀತಾ ಅರೆಸ್ಟ್!
ಲಂಚಕ್ಕೆ ಕೈಚಾಚಿದ ತಹಶೀಲ್ದಾರ್ ಬಂಧನ: 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗೀತಾ ಅರೆಸ್ಟ್!
ಕೃಷಿ ಜಮೀನಿನ ಭೂ ಪರಿವರ್ತನೆ ಮಾಡಿಕೊಡಲು 30 ಸಾವಿರ ಲಂಚದ ಬೇಡಿಕೆ ಇಟ್ಟಿದ್ದ ತಹಶೀಲ್ದಾರ್ ಗೀತಾಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಗೀತಾ ಅವರು ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ಆಗಿದ್ದು, ಗೋಡೆಕೆರೆ ಗ್ರಾಮದ ರೈತ ಮಲ್ಲಿಕಾರ್ಜುನ್ ಅವರಿಗೆ ಲಂಚ ನೀಡಲು ಬೇಡಿಕೆ ಮಂಡಿಸಿದ್ದರು. ಅವರಿಗೆ ಸೇರಿದ್ದ 33 ಗುಂಟೆ ಜಮೀನನ್ನು ಭೂ ಪರಿವರ್ತನೆ ಮಾಡಿಕೊಡಲು 3 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು.
ಮೊದಲ ಕಂತಿನ ಹಣವಾಗಿ 20 ಸಾವಿರ ರೂ. ಹಣ ಪಡೆದಿದ್ದರು. ರಾತ್ರಿ ಸುಮಾರು 8 ಗಂಟೆಗೆ ಎರಡನೇ ಕಂತಿನ 30 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಆಕೆಯನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು.
ತುಮಕೂರು ಲೋಕಾಯುಕ್ತ ಡಿವೈಎಸ್ಪಿ ರಾಮಕೃಷ್ಣ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ರಾಮರೆಡ್ಡಿ, ಸುರೇಶ್ ಗೌಡ ಅವರ ತಂಡ ಈ ಬಂಧನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.