-->

ಮಂಗಳೂರು: ಮಾವು ಮತ್ತು ಹಲಸು ಮೇಳ: ಆಸಕ್ತ ಕೃಷಿಕರಿಂದ ಅರ್ಜಿ ಆಹ್ವಾನ

ಮಂಗಳೂರು: ಮಾವು ಮತ್ತು ಹಲಸು ಮೇಳ: ಆಸಕ್ತ ಕೃಷಿಕರಿಂದ ಅರ್ಜಿ ಆಹ್ವಾನ

ಮಂಗಳೂರು: ಮಾವು ಮತ್ತು ಹಲಸು ಮೇಳ: ಆಸಕ್ತ ಕೃಷಿಕರಿಂದ ಅರ್ಜಿ ಆಹ್ವಾನ

 


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರಿಂದ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವ ಶೀರ್ಷಿಕೆ ಅಡಿ ಮಾವು ಮತ್ತು ಹಲಸು ಮೇಳವನ್ನು ಮೇ ತಿಂಗಳ 5 ರಿಂದ 13 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದೆ.

 

ರೈತ ಬಾಂಧವರು ತಾವು ಬೆಳೆದ ಮಾವು  ಮತ್ತು ಹಲಸು ಮೇಳದಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು ತಮ್ಮ ಸ್ವ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಮಂಗಳೂರಿನ ಕೊಟ್ಟಾರದಲ್ಲಿ ಇರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ಇರುವ ತೋಟಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು

 

ಆಸಕ್ತ ಕೃಷಿಕರು ತೋಟಗಾರಿಕೆ ಇಲಾಖೆಯ ಇ-ಮೇಲ್ ವಿಳಾಸddhdk@yahoo.com ಮೂಲಕ ಮೇ 7ರಂದು ಮಧ್ಯಾಹ್ನ  3 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.

 

ಇನ್ನಷ್ಟು ಹೆಚ್ಚಿನ ಮಾಹಿತಿಗೆ ಇಲಾಖೆಯ ಫೋನ್ ನಂಬರ್: 0824-2423628 ಅನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.


Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99