-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಡುಪಿಯಲ್ಲಿ ಸಂಚಾರ ಬದಲಾವಣೆ: ಆಗಸ್ಟ್ 15ರಿಂದ ಅಕ್ಟೋಬರ್ 15 ವರೆಗೆ ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಉಡುಪಿಯಲ್ಲಿ ಸಂಚಾರ ಬದಲಾವಣೆ: ಆಗಸ್ಟ್ 15ರಿಂದ ಅಕ್ಟೋಬರ್ 15 ವರೆಗೆ ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಉಡುಪಿಯಲ್ಲಿ ಸಂಚಾರ ಬದಲಾವಣೆ: ಆಗಸ್ಟ್ 15ರಿಂದ ಅಕ್ಟೋಬರ್ 15 ವರೆಗೆ ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ




ಉಡುಪಿಯ ಮಲ್ಪೆ ಬಂದರು ಹಾಗೂ ಮಲ್ಪೆ ಜಂಕ್ಷನ್‌ಗೆ ಸಂಬಂಧಿಸಿದಂತೆ ಸಂಚಾರ ನಿಯಂತ್ರಣ ಹಾಗೂ ಸುಗಮ ಸಂಚಾರ ನಿರ್ವಹಣೆ ಸಲುವಾಗಿ ಆಗಸ್ಟ್ 15 ರಿಂದ ಅಕ್ಟೋಬರ್ 15 ರ ವರೆಗೆ ಎರಡು ತಿಂಗಳ ಕಾಲ ಪ್ರಾಯೋಗಿಕವಾಗಿ ಈ ಕೆಳಕಂಡ ಮಾರ್ಗ ಬದಲಾವಣೆ ಮಾಡಿ ವಾಹನ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.


ಐಸ್ ತುಂಬಿದ ವಾಹನ ಮತ್ತು ನೀರಿನ ವಾಹನ, ಇನ್ಸುಲೇಟರ್ ವಾಹನ, ಮೀನಿಗೆ ಸಂಬಂಧಿಸಿದ ಲಘು ಹಾಗೂ ಬೃಹತ್ ವಾಹನಗಳು, ಟೂರಿಸ್ಟ್ ವಾಹನಗಳು ಮಲ್ಪೆ ಜಂಕ್ಷನ್‌ನಿಂದ ಬಲಕ್ಕೆ ತಿರುಗಿ ರಾಜ್ ಫಿಶ್ ಮಿಲ್ ಕ್ರಾಸ್ ಮೂಲಕ ಕೊಳ, ಹನುಮಾನ್ ನಗರ ಮಾರ್ಗವಾಗಿ ಕೊಚ್ಚಿನ್ ಶಿಪ್ ಯಾರ್ಡ್ ಬಳಿ ಇರುವ ಗೇಟ್ ಮೂಲಕ ಒಳಗೆ ಪ್ರವೇಶಿಸಬೇಕು.


ಸಿಟಿಜನ್ ಸರ್ಕಲ್ ಕಡೆಯಿಂದ ಆಗಮಿಸುವ ಎಲ್ಲಾ ಐಸ್ ತುಂಬಿದ ವಾಹನ ಮತ್ತು ನೀರಿನ ವಾಹನ. ಇನ್ಸುಲೇಟರ್ ವಾಹನ, ಮೀನಿಗೆ ಸಂಬಂಧಿಸಿದ ಲಘು ವಾಹನ ಹಾಗೂ ಬೃಹತ್ ವಾಹನಗಳು, ಟೂರಿಸ್ಟ್ ವಾಹನಗಳು ಮಲ್ಪೆ ಜಂಕ್ಷನ್‌ನಿಂದ ಬಲಕ್ಕೆ ತಿರುಗಿ ರಾಜ್ ಫಿಶ್ ಮಿಲ್ ಕ್ರಾಸ್ ಮೂಲಕ ಕೊಳ, ಹನುಮಾನ್ ನಗರ ಮಾರ್ಗವಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಬಳಿ ಇರುವ ಗೇಟ್ ಮೂಲಕ ಒಳಗೆ ಪ್ರವೇಶಿಸಬೇಕು.


ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಿರುವುದಾಗಿ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99