-->
ಬರ್ಬರವಾಗಿ ಕೊಲೆಯಾದ ಯುವಕ- ಪ್ರಾಣಕ್ಕೆ ಮುಳುವಾಯ್ತು ಪ್ರೀತಿ

ಬರ್ಬರವಾಗಿ ಕೊಲೆಯಾದ ಯುವಕ- ಪ್ರಾಣಕ್ಕೆ ಮುಳುವಾಯ್ತು ಪ್ರೀತಿ


ಕೊಪ್ಪಳ: ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಬರ್ಬರ ಕೊಲೆ ನಡೆಸಿರುವ ಘಟನೆ ರವಿವಾರ ರಾತ್ರಿ ಕೊಪ್ಪಳ ನಗರದ ವಾರ್ಡ್​ 3ರ ಮಸೀದಿ ಮುಂಭಾಗದಲ್ಲಿ ನಡೆದಿದೆ.

ಸಾದಿಕ್ ಕೋಲ್ಕಾರ್​ ಎಂಬುವನಿಂದ ಗವಿಸಿದ್ದಪ್ಪ ನಾಯಕ್​​ನ ಕೊಲೆ ಮಾಡಿದ್ದಾನೆ. ಗವಿಸಿದ್ದಪ್ಪನನ್ನು ಕೊಲೆ ಮಾಡಿದ ಸಾದಿಕ್​ ನೇರವಾಗಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಆತ ಸೇರಿದಂತೆ ನಾಲ್ವರ ವಿರುದ್ಧ ಸೆಕ್ಷನ್​​ 103(1) ಬಿಎನ್​ಎಸ್​ 2023 ಕಲಂ 3(2)ವಿ, ಎಸ್​ಸಿ-ಎಸ್​ಟಿ ಕಾಯ್ದೆ 1989 ಅಡಿಯಲ್ಲಿ ದೂರು ದಾಖಲಾಗಿದೆ.

ಗವಿಸಿದ್ದಪ್ಪ ಓರ್ವ ಮುಸ್ಲಿಂ ಯುವತಿಯನ್ನು  ಪ್ರೀತಿಸಿದ್ದೇ ಕೊಲೆಗೆ ಕಾರಣ. ಕಳೆದ ಎರಡು ವರ್ಷಗಳಿಂದ ಗವಿಸಿದ್ದಪ್ಪ, ಗೌರಿ ಅಂಗಳ ಏರಿಯಾದ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ. ಜೊತೆಗೆ ಮನೆ ಬಿಟ್ಟು ಓಡಿ ಸಹ ಹೋಗಿದ್ದರು.‌ ಈ ಕುರಿತಂತೆ ನಾಲ್ಕೈದು ಬಾರಿ ಪಂಚಾಯತಿಕೆ ಸಹ ಮಾಡಲಾಗಿತ್ತು. ಆದರೂ ಸಹ ಗವಿಸಿದ್ದಪ್ಪ ಹಾಗೂ ಮುಸ್ಲಿಂ ಯುವತಿಯ ನಡುವೆ ಪ್ರೀತಿ ಮುಂದುವರೆದಿತ್ತು. ಹೀಗಾಗಿ ಗವಿಸಿದ್ದಪ್ಪನನ್ನು ಸಾದಿಕ್ ಮಚ್ಚಿನಿಂದ ಕೊಲೆ ಮಾಡಿದ್ದಾನೆ.

ಸದ್ಯ ಇದೊಂದು ಪಕ್ಕಾ ಪ್ರೀ ಪ್ಲ್ಯಾನ್ಡ್ ಮರ್ಡರ್ ಅನ್ನೋದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಹದ್ದೂರ ಬಂಡಿ ರಸ್ತೆಯಿಂದ ಬರುತ್ತಿದ್ದ ಗವಿ ಸಿದ್ದಪ್ಪನನ್ನು ಅಡ್ಡ ಹಾಕಿ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಪ್ಪಳ ನಗರದಲ್ಲಿ ಇಷ್ಟೊಂದು ಭೀಕರ ಕೊಲೆ ನಡೆದಿರಲಿಲ್ಲ. ಯಾವಾಗ ಇಂತಹದ್ದೊಂದು ಕೊಲೆ ನಡೆದಿದೆ ಎಂದು ಸುದ್ದಿ ಕೇಳಿದರೋ, ಬಳಿಕ ಇಡೀ ನಗರದ ಜನ ಬೆಚ್ಚಿ ಬಿದ್ದಿದ್ದಾರೆ. ಇನ್ನು ಕೊಲೆಯಾದ ಯುವಕ ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮ ಪಂಚಾಯತ್​ ಸದಸ್ಯ ಯಮನೂರಪ್ಪ ನಾಯಕ್​​ ಸಂಬಂಧಿ.

ಇನ್ನು ಮೂಲಗಳ ಪ್ರಕಾರ ಈ ಮೊದಲು ಗವಿಸಿದ್ದಪ್ಪ ಪ್ರೀತಿಸುತ್ತಿದ್ದ ಮುಸ್ಲಿಂ ಅಪ್ರಾಪ್ತೆಯನ್ನು ಸಾದಿಕ್ ಪ್ರೀತಿಸುತ್ತಿದ್ದನಂತೆ.‌ ಸಾದಿಕ್​ನೊಂದಿಗೆ ಲವ್ ಬ್ರೇಕಪ್ ಮಾಡಿಕೊಂಡ ಆಕೆ ಗವಿಸಿದ್ದಪ್ಪನನ್ನು ಪ್ರೀತಿಸಲು ಶುರು ಮಾಡಿದ್ದಳು. ಈ ವಿಚಾರ ತಿಳಿದ ಸಾದಿಕ್ ಅನೇಕ ಬಾರಿ ಗವಿಸಿದ್ದಪ್ಪನೊಂದಿಗೆ ಜಗಳ ಸಹ ಮಾಡಿದ್ದನಂತೆ.‌ ಈ ವಿಷಯ ಅತಿರೇಕಕ್ಕೆ ಹೋಗಿ ರವಿವಾರ ರಾತ್ರಿ 8ಗಂಟೆಗೆ ಮಸೀದಿ ಬಳಿ ಬೈಕ್​ನಲ್ಲಿ ಬರುತ್ತಿದ್ದ ಗವಿಸಿದ್ದಪ್ಪನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಘಟನೆಯ ಸುದ್ದಿ ತಿಳಿಯುತ್ತಲೇ ಎಸ್​ಪಿ ಡಾ. ರಾಮ್ ಅರಸಿದ್ದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಬಳ್ಳಾರಿ ಐಜಿಪಿ ವರ್ತಿಕಾ ಕಟಿಯಾರ್ ಸಹ ಕೊಪ್ಪಳಕ್ಕೆ ಭೇಟಿ ನೀಡಿ ಸಿಟಿ ರೌಂಡ್ಸ್ ಹಾಕಿದರು. ಸದ್ಯ ಸಾದಿಕ್​ ಪೊಲೀಸರಿಗೆ ಶರಣಾಗಿದ್ದಾನೆ. ಆದರೆ ಆತನಿಗೆ ಸಹಾಯ ಮಾಡಿದ ಇಬ್ಬರು ಮೂವರು ನಾಪತ್ತೆಯಾಗಿದ್ದಾರೆ. ಕೊಲೆ ಮಾಡಿ ಶರಣಾದ ಸಾದಿಕ್​ ಪ್ರೀತಿ ವಿಚಾರವಾಗಿ ಕೊಲೆ ಮಾಡಿದ್ದೇನೆಂದು ಒಪ್ಪಿಕೊಂಡಿದ್ದಾನೆ.

ಘಟನಾ ಸ್ಥಳದಲ್ಲಿ ಎರಡು ಮಚ್ಚುಗಳು ಪತ್ತೆಯಾಗಿವೆ‌, ಆದರೆ ಪೊಲೀಸರು ಮಾತ್ರ ಸಾದಿಕ್ ಒಬ್ಬನೇ ಕೊಲೆ ಮಾಡಿದ್ದಾನೆ ಎನ್ನುವುದು ಹಲವು ಅನುಮಾನಗಳನ್ನು ಉಂಟುಮಾಡಿದೆ. ಇನ್ನು ಮೂಲಗಳ ಪ್ರಕಾರ ಮೂರು ಜನ ಮುಸ್ಲಿಂ ಯುವಕರು ಸೇರಿ ಗವಿಸಿದ್ದಪ್ಪನನ್ನು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇನ್ನುಳಿದವರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಪೊಲೀಸರ ನಿರ್ಲಕ್ಷ್ಯದಿಂದ ಗವಿಸಿದ್ದಪ್ಪ ನಾಯಕ್ ಕೊಲೆ ಆಯ್ತಾ ಎಂಬ ಅನುಮಾನಗಳು ಕೂಡ ಹುಟ್ಟಿಕೊಂಡಿವೆ. ಏಕೆಂದರೆ ರವುವಾರ ಕೊಲೆಗೂ‌ ಮುನ್ನ ಸಾದಿಕ್​ ಮಚ್ಚು ಹಿಡಿದು ರೀಲ್ಸ್ ಮಾಡಿ ಬಿಲ್ಡಪ್ ಕೊಟ್ಟಿದ್ದ. ತನ್ನ ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ. ಬಳಿಕ ರಾತ್ರಿ 7.30ಕ್ಕೆ ಗವಿಸಿದ್ದಪ್ಪನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಒಟ್ಟಿನಲ್ಲಿ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆಯಾಗಿರುವ ಹಿನ್ನಲೆಯಲ್ಲಿ ಕೊಪ್ಪಳದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ.

Ads on article

Advertise in articles 1

advertising articles 2

Advertise under the article