-->
ಮಂಗಳೂರು: ಜಾನುವಾರು ಕಳವು, ಗೋಹತ್ಯೆ ಆರೋಪಿ ಮನೆ - ಅಕ್ರಮ ಕಸಾಯಿಖಾನೆ ಮುಟ್ಟುಗೋಲು

ಮಂಗಳೂರು: ಜಾನುವಾರು ಕಳವು, ಗೋಹತ್ಯೆ ಆರೋಪಿ ಮನೆ - ಅಕ್ರಮ ಕಸಾಯಿಖಾನೆ ಮುಟ್ಟುಗೋಲು


ಮಂಗಳೂರು: ನಿರಂತರ ಗೋಕಳವು, ಗೋಹತ್ಯೆ ಮಾಡುತ್ತಿದ್ದ ಆರೋಪಿಯ ಮನೆ ಹಾಗೂ ಅಕ್ರಮ ಕಸಾಯಿಖಾನೆಯನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಮನೆ ಹಾಗೂ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿರುವ ದ.ಕ.ಜಿಲ್ಲೆಯ ಮೊದಲನೆ ಪ್ರಕರಣ ಇದಾಗಿದೆ. 

ಪುದು ಗ್ರಾಮದ ಮಾರಿಪಳ್ಳ ನಿವಾಸಿ ಹಸನಬ್ಬ  ಎಂಬಾತನ ಮನೆಯನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ.


ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಗೋಕಳವು, ಗೋವಧೆಯಂತಹ  ಪ್ರಕರಣಗಳಲ್ಲಿ ಭಾಗಿಯಾಗಿರುವ ಅಸಾಮಿ ಹಸನಬ್ಬನ ಮೇಲೆ ಅಕ್ರ 123/2025 ಕಲಂ 303 ಬಿಎನ್‌ ಎಸ್‌ ಕಲಂ 4,7,12 ಗೋಸಂರಕ್ಷಣಾ ಕಾಯಿದೆ ಮತ್ತು 11(ಡಿ) ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈತನನ್ನು ದಸ್ತಗಿರಿ ಮಾಡಿದ ಪೊಲೀಸರು ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈತನ ವಿರುದ್ಧ 2017ನೇ ಸಾಲಿನಲ್ಲಿ ಅಕ್ರ 65/2017 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯ್ದೆ ಮತ್ತು 11(ಎಲ್‌) ಗೋಹತ್ಯೆ ನಿಷೇಧ ಕಾಯ್ದೆ, 2008ನೇ ಸಾಲಿನಲ್ಲಿ ಅಕ್ರ 88/2018 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯ್ದೆ ಮತ್ತು 11(ಎಲ್‌) ಗೋಹತ್ಯೆ ನಿಷೇಧ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು.


ಹಸನಬ್ಬ ಗೋಕಳವುಗೈದು ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಮನೆಯಲ್ಲಿಯೇ ಕಸಾಯಿಖಾನೆ ನಿರ್ಮಾಣ ಮಾಡಿಕೊಂಡು ವಧೆ ಮಾಡಿ ಮಾಂಸ ಮಾಡುತ್ತಿದ್ದ. ಆದ್ದರಿಂದ ಈತನ ನಿಯಂತ್ರಕ್ಕೆ ಕಸಾಯಿಖಾನೆ ಹಾಗೂ ಮನೆಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ವರದಿ ಸಲ್ಲಿಸಲಾಗಿತ್ತು

ಅದರಂತೆ ಸಹಾಯಕ ಆಯುಕ್ತರು ಹಾಗೂ  ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಂ 8(4) 8(5) ರಡಿಯಲ್ಲಿ ದಿನಾಂಕ: 25/09/2025 ರಂದು  ಪ್ರಕರಣ ಸಂಖ್ಯೆ  ಎಂ.ಎ.ಜಿ/ಎಸ್‌ ಆರ್‌44/2025‌ ರಂತೆ ಠಾಣಾ ಅಕ್ರ 123/2025 ನೇ ಯಂತೆ ಪುದು ಗ್ರಾಪಂ ವ್ಯಾಪ್ತಿಯ ಮಾರಿಪಳ್ಳ ಪಾಡಿ ಎಂಬಲ್ಲಿರುವ ಹಸನಬ್ಬನ ಮನೆ ಹಾಗೂ ಅಕ್ರಮ ಕಸಾಯಿಖಾನೆಯನ್ನು ಜಪ್ತು ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.

Ads on article

Advertise in articles 1

advertising articles 2

Advertise under the article